Webdunia - Bharat's app for daily news and videos

Install App

ಇನ್ಮುಂದೆ ಇಟಲಿಯಲ್ಲಿ ಇಂಗ್ಲಿಷ್ ಭಾಷೆ ಬ್ಯಾನ್ !

Webdunia
ಬುಧವಾರ, 5 ಏಪ್ರಿಲ್ 2023 (09:17 IST)
ರೋಮ್ : ಇನ್ನು ಮುಂದೆ ಸರ್ಕಾರಿ ಸಂವಹನ ಇಟಲಿ ಭಾಷೆಯಲ್ಲಿ ನಡೆಯಬೇಕು. ಒಂದು ವೇಳೆ ಇಂಗ್ಲಿಷ್ ಅಥವಾ ಬೇರೆ ಯಾವುದೇ ವಿದೇಶಿ ಭಾಷೆಯಲ್ಲಿ ನಡೆದರೆ ದಂಡವನ್ನು ವಿಧಿಸುವ ಪ್ರಸ್ತಾಪ ಇರುವ ಚರ್ಚೆಗೆ ಗ್ರಾಸವಾಗುವ ಮಸೂದೆಯೊಂದು ಇಟಲಿ ಶಾಸನಸಭೆಯಲ್ಲಿ ಮಂಡನೆಯಾಗಿದೆ.
 
ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯ ಅವರ ಬ್ರದರ್ಸ್ ಆಫ್ ಇಟಲಿ ಪಕ್ಷ ಕರಡು ಮಸೂದೆಯನ್ನು ಮಂಡಿಸಿದೆ. ಇದರ ಪ್ರಕಾರ ದೇಶದಲ್ಲಿ ಅಧಿಕೃತ ಸಂವಹನಕ್ಕೆ ಇಟಲಿ ಭಾಷೆಯಲ್ಲಿ ನಡೆಯಬೇಕು.

ಯಾವುದೇ ವಿದೇಶಿ ಭಾಷೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಮಾಡುವಂತಿಲ್ಲ ಎಂಬ ನಿಯಮವನ್ನು ಒಳಗೊಂಡಿದೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ 100,000 ಯುರೋ (ಸುಮಾರು 90 ಲಕ್ಷ ರೂ.) ವರೆಗೆ ದಂಡವನ್ನು ವಿಧಿಸಲಾಗುವ ಪ್ರಸ್ತಾಪವನ್ನು ಒಳಗೊಂಡಿದೆ.

ಈ ಮಸೂದೆ ಈಗ ಸಂಸತ್ತಿನ ಚರ್ಚೆಯ ಹಾದಿಯಲ್ಲಿದೆ. ಇಟಾಲಿಯನ್ ಭಾಷೆಯನ್ನೇ ಲಿಖಿತ ಹಾಗೂ ಮೌಖಿಕವಾಗಿ ಬಳಸಲು ಹಾಗೂ ಸಾರ್ವಜನಿಕರಿಗೆ ಈ ಭಾಷೆಯ ಜ್ಞಾನ ಹಾಗೂ ಪಾಂಡಿತ್ಯವನ್ನು ಹೆಚ್ಚಿಸಲು ಈ ನಿರ್ಧಾರ ಮಾಡಲಾಗಿದೆ. ಇದೀಗ ವಿದೇಶಿ ಭಾಷೆಗಳ ಬ್ಯಾನ್ ಇಟಲಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಗಳಲ್ಲಿ ಅಧಿಕೃತ ದಾಖಲೆಗಳಲ್ಲಿರುವ ಇಂಗ್ಲಿಷ್ ಬಳಕೆಯನ್ನು ನಿಷೇಧಿಸುತ್ತದೆ. 

ಇಷ್ಟು ಮಾತ್ರವಲ್ಲದೇ ದೇಶದಲ್ಲಿ ಸಾರ್ವಜನಿಕ ಸರಕು ಹಾಗೂ ಸೇವೆಗಳ ಪ್ರಚಾರ ಮತ್ತು ಬಳಕೆಗೆ ಈ ನಿಯಮ ಕಡ್ಡಾಯವಾಗಿದೆ. ಒಂದು ವೇಳೆ ಉಲ್ಲಂಘನೆಯಾದರೆ 5,000 ಯುರೋದಿಂದ 100,000 ಯುರೋ ವರೆಗೆ ದಂಡ ವಿಧಿಸುವ ಪ್ರಸ್ತಾಪವನ್ನು ಒಳಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments