Webdunia - Bharat's app for daily news and videos

Install App

ವೆನೆಝುವೆಲಾದ ನೈಟ್‌ಕ್ಲಬ್‌ ನಲ್ಲಿ ಅಶ್ರುವಾಯು ಸ್ಫೋಟ ; ನೂಕುನುಗ್ಗಲಿಗೆ 17 ಜನರು ಬಲಿ

Webdunia
ಸೋಮವಾರ, 18 ಜೂನ್ 2018 (14:20 IST)
ಕಾರಾಕಸ್ : ವೆನೆಝುವೆಲಾದ ರಾಜಧಾನಿ ಕಾರಾಕಸ್‌ನ ನೈಟ್‌ಕ್ಲಬ್‌ವೊಂದರಲ್ಲಿ ಅಶ್ರುವಾಯು ಗ್ರೆನೇಡ್ ಸ್ಫೋಟಿಸಿದ ಕಾರಣ ಉಂಟಾದ ನೂಕುನುಗ್ಗಲಿನಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಎಲ್ ಪ್ಯಾರಾಸಿಯೊ ಪ್ರದೇಶದಲ್ಲಿನ 'ಲಾಸ್ ಕೊಟೊರಸ್' ಕ್ಲಬ್‌ನಲ್ಲಿ ಮಿಡ್ಲ್ ಸ್ಕೂಲ್‌ವೊಂದರ ಗ್ರಾಜ್ಯುಯೇಷನ್ ಪಾರ್ಟಿಯಲ್ಲಿ ಎರಡು ಗುಂಪುಗಳ ನಡುವೆ  ಹೊಡೆದಾಟ ನಡೆದಿದ್ದು, ಆ ವೇಳೆ ಬಾತ್‌ರೂಮಿನಲ್ಲಿ ಅಶ್ರುವಾಯು ಬಾಂಬ್‌ನ್ನು ಸಿಡಿಸಲಾಗಿತ್ತು. ಆಗ ಜನರು ಜೀವವುಳಿಸಿಕೊಳ್ಳಲು ಏಕಕಾಲದಲ್ಲಿ ಮುಚ್ಚಿದ್ದ ಬಾಗಿಲುಗಳತ್ತ ಧಾವಿಸಿದ್ದ ಕಾರಣ ಉಂಟಾದ  ನೂಕುನುಗ್ಗಲಿನಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ.


ಅಶ್ರುವಾಯು ಬಾಂಬ್‌ನ್ನು ಸ್ಫೋಟಿಸಿದ್ದರೆನ್ನಲಾದ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಎಂಟು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾಗೇ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದಕ್ಕೆ ಮತ್ತು ಅಶ್ರುವಾಯು ಬಾಂಬ್ ಒಳಗೆ ತರುವುದನ್ನು ತಡೆಯದಿದ್ದಕ್ಕಾಗಿ ಕ್ಲಬ್‌ನ ಮಾಲಿಕನನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments