ಪಾಶ್ಚಾತ್ಯ ರಾಷ್ಟ್ರಗಳಿಗೆ ಭಯವೇ? : ಝೆಲೆನ್ಸ್ಕಿ

Webdunia
ಭಾನುವಾರ, 27 ಮಾರ್ಚ್ 2022 (10:34 IST)
ಕೀವ್ : ಶಸ್ತ್ರಾಸ್ತ್ರಗಳನ್ನು ನೀಡುವಂತೆ ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮನವಿ ಮಾಡಿ,

ರಷ್ಯಾ ಬಗ್ಗೆ ಭಯವಿದೆಯೇ ಎಂದೂ ಪ್ರಶ್ನಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ಕ್ಷಿಪಣಿಗಳು ಮತ್ತು ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ರವಾನಿಸುವುದಾಗಿ ಹಲವು ರಾಷ್ಟ್ರಗಳು ಭರವಸೆ ನೀಡಿವೆ.

ಆದರೆ ಉಕ್ರೇನ್ಗೆ ಯುದ್ಧ ಟ್ಯಾಂಕರ್ಗಳು, ವಿಮಾನಗಳು ಮತ್ತು ಜಲಾಂತರ್ಗಾಮಿಗಳ ಅವಶ್ಯಕತೆ ಇದೆ. ನಮ್ಮ ಪಾಲುದಾರ ರಾಷ್ಟ್ರಗಳು ಯಾವೆಲ್ಲ ಶಸ್ತ್ರಾಸ್ತ್ರಗಳನ್ನು ಹೊಂದಿವೆಯೋ, ಯಾವೆಲ್ಲ ಶಸ್ತ್ರಾಸ್ತ್ರಗಳು ಧೂಳು ಹಿಡಿಯುತ್ತಿವೆಯೋ ಅವು ಉಕ್ರೆನ್ಗಾಗಿ ಮಾತ್ರವಲ್ಲ, ಇಡೀ ಯುರೋಪಿನ ಸ್ವಾತಂತ್ರ್ಯಕ್ಕಾಗಿ ಅಗತ್ಯವಾಗಿದೆ ಎಂದಿದ್ದಾರೆ.

ಶಸ್ತ್ರಾಸ್ತ್ರ ನೀಡುವಂತೆ ಮನವಿ: ನ್ಯಾಟೊ ಹೊಂದಿರುವ ಶೇ 1 ರಷ್ಟು ಯುದ್ಧ ವಿಮಾನಗಳು ಮತ್ತು ಶೇ 1 ರಷ್ಟು ಟ್ಯಾಂಕ್ಗಳು ಉಕ್ರೇನ್ಗೆ ಬೇಕಾಗಿವೆ. ನಾವು ಅದಕ್ಕಿಂತ ಹೆಚ್ಚೇನೂ ಕೇಳುತ್ತಿಲ್ಲ.

ಪೂರ್ವ ಯುರೋಪ್ನಲ್ಲಿರುವ ರಷ್ಯಾ ನಿರ್ಮಿತ ಯುದ್ಧ ವಿಮಾನಗಳನ್ನು ಇನ್ನೂ ಉಕ್ರೇನ್ಗೆ ರವಾನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಫೆಬ್ರುವರಿ 24ರಿಂದ ರಷ್ಯಾ ದಾಳಿಯ ಪರಿಣಾಮ ಉಕ್ರೇನ್ನ ಸುಮಾರು 30 ಲಕ್ಷ ಜನರು ತಮ್ಮ ರಾಷ್ಟ್ರ ತೊರೆದು ವಲಸೆ ಹೋಗಿದ್ದು, ಪಶ್ಚಿಮ ರಾಷ್ಟ್ರಗಳ ಬೆಂಬಲ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments