Webdunia - Bharat's app for daily news and videos

Install App

ಪ್ರಧಾನಿ ಮೋದಿ ಬಗ್ಗೆ ಆರೋಪ ಮಾಡಿದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌

Webdunia
ಸೋಮವಾರ, 28 ಮೇ 2018 (18:00 IST)
ಇಸ್ಲಾಮಾಬಾದ್ : ಭಾರತ ಮತ್ತು ಪಾಕಿಸ್ತಾನ ಶಾಂತಿ ಮತ್ತು ಸಾಮರಸ್ಯದ ಹಾದಿಯಲ್ಲಿದ್ದರೂ, ಪ್ರಧಾನಿ ನರೇಂದ್ರ ಮೋದಿ ಶಾಂತಿ ಮಾತುಕತೆಯ ಪರ ಇಲ್ಲ' ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರು ಪ್ರಧಾನಿ ಮೋದಿ ಅವರ ವಿರುದ್ಧ ಆರೋಪ ಮಾಡಿದ್ದಾರೆ.


ಸುದ್ದಿ ವಾಹಿನಿಯೊಂದರಲ್ಲಿ  ನೀಡಿರುವ ಸಂದರ್ಶನದ ವೇಳೆ ಮಾತನಾಡಿದ ಅವರು,’ ನಾನು ಅಧಿಕಾರದಲ್ಲಿದ್ದಾಗ ಅಂದಿನ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಿಪೇಯಿ ಮತ್ತು ಮನಮೋಹನ ಸಿಂಗ್‌ ಜೊತೆ ಮಾತುಕತೆ ನಡೆಸಿದ್ದೆ. ಸಿಯಾಚಿನ್ ಮತ್ತು ಕಾಶ್ಮೀರ ವಿವಾದ ಸೇರಿ ನಾಲ್ಕು ಅಂಶದ ಕಾರ್ಯತಂತ್ರಗಳನ್ನು ಹೆಣೆದು ವಿವಾದ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದ್ದೆವು. ಆದರೆ, ಮುಂದಿನ ದಿನಗಳಲ್ಲಿ ಅದು ನಡೆಯುವ ಸಾಧ್ಯತೆ ಇಲ್ಲ' ಎಂದು ತಿಳಿಸಿದ್ದಾರೆ.


ಹಾಗೇ ‘ಪಾಕಿಸ್ತಾನವನ್ನು ಅಗತ್ಯ ಇದ್ದಾಗ ಬಳಸಿಕೊಳ್ಳುವ ಅಮೆರಿಕ, ಬೇಡವೆಂದಾಗ ದೂರ ತಳ್ಳುತ್ತಿದೆ. ಭಾರತದ ಜೊತೆ ಸೇರಿ ಪಾಕ್ ವಿರುದ್ಧ ಒಗ್ಗೂಡುತ್ತಿರುವುದೇ ಇದಕ್ಕೆ ಕಾರಣ. ಭಾರತ ಮತ್ತು ಪಾಕಿಸ್ತಾನ ನಡುವಿನ ಶೀತಲ ಸಮರದ ಸಂದರ್ಭದಲ್ಲಿ ಅಮೆರಿಕವು ಭಾರತವನ್ನು ಬಹಿರಂಗವಾಗಿಯೇ ಬೆಂಬಲಿಸಿದೆ. ಇದರ ಪರಿಣಾಮ ನೇರವಾಗಿ ಪಾಕಿಸ್ತಾನದ ಮೇಲೆ ಉಂಟಾಗುತ್ತಿದೆ. ಅಫ್ಘಾನಿಸ್ತಾನದಲ್ಲಿ ಭಾರತದ ಪಾತ್ರದ ಬಗ್ಗೆ ವಿಶ್ವಸಂಸ್ಥೆ ಪರೀಕ್ಷೆ ಮಾಡಬೇಕೆಂಬುದು ನಮ್ಮ ಅಪೇಕ್ಷೆ' ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments