Webdunia - Bharat's app for daily news and videos

Install App

ಶ್ರೀಲಂಕಾ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

Webdunia
ಶನಿವಾರ, 3 ಸೆಪ್ಟಂಬರ್ 2022 (11:18 IST)
ಕೊಲಂಬೋ : ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಗರಿಕರು ನಡೆಸಿದ ಭಾರೀ ಪ್ರತಿಭಟನೆ ಹಿನ್ನೆಲೆ ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶನಿವಾರ ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ.

ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿ, ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.

ಜುಲೈ 9 ರಂದು ಪ್ರತಿಭಟನಾಕಾರರು ರಾಜಪಕ್ಸೆ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಶ್ರೀಲಂಕಾ ತೊರೆದಿದ್ದ ರಾಜಪಕ್ಸೆಗೆ ಸಿಂಗಾಪುರದಲ್ಲಿ 14 ದಿನಗಳ ಭೇಟಿಯ ಪಾಸ್ ನೀಡಲಾಗಿತ್ತು. ಅವರು ಮಾಲ್ಡೀವ್ಸ್ನಿಂದ ಸಿಂಗಾಪುರಕ್ಕೆ ಹೋಗಿ, ಬಳಿಕ ಥೈಲ್ಯಾಂಡ್ಗೆ ತೆರಳಿದ್ದರು. ಈ ಎಲ್ಲಾ ಘಟನೆಗಳು ನಡೆದು ಇದೀಗ 2 ತಿಂಗಳ ಬಳಿಕ ರಾಜಪಕ್ಸೆ ಶ್ರೀಲಂಕಾಗೆ ಮರಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments