Webdunia - Bharat's app for daily news and videos

Install App

ಮದುವೆಯಾದ ನಾಲ್ಕೇ ದಿನಕ್ಕೆ ದಂಪತಿ ದುರಂತ ಅಂತ್ಯ!

Webdunia
ಬುಧವಾರ, 3 ನವೆಂಬರ್ 2021 (09:37 IST)
ಚೆನ್ನೈ : ಹೊಸದಾಗಿ ಮದುವೆಯಾಗಿದ್ದ ಗಂಡ-ಹೆಂಡತಿ ಕಾರಿನಲ್ಲಿ ಹೋಗುವಾಗ ಭೀಕರ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೇವಲ 4 ದಿನಗಳ ಹಿಂದೆ ಮದುವೆಯಾಗಿದ್ದ ದಂಪತಿ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇರಳ ಮೂಲದ ಮನೋಜ್ ಕುಮಾರ್ (31) ಮತ್ತು ಪೆರುಗಲಥೂರ್ ಮೂಲದ ಕಾರ್ತಿಕಾ (30) ಮೃತ ದಂಪತಿಯಾಗಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಆ ಗಂಡ-ಹೆಂಡತಿ ಸಂಚರಿಸುತ್ತಿದ್ದ ಕಾರು ಅಪ್ಪಚ್ಚಿಯಾಗಿದೆ.
ಮನೋಜ್ ಕುಮಾರ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಹೆಂಡತಿ ಕಾರ್ತಿಕಾ ಖಾಸಗಿ ಕ್ಲಿನಿಕ್‌ನಲ್ಲಿ ವೈದ್ಯೆಯಾಗಿದ್ದರು. ನಾಲ್ಕು ದಿನಗಳ ಹಿಂದೆ ಅಕ್ಟೋಬರ್ 28ರಂದು ಇವರಿಬ್ಬರೂ ಮದುವೆಯಾಗಿದ್ದರು. ಭಾನುವಾರ ಈ ದಂಪತಿಗಳು ಕಾರ್ತಿಕಾಳ ಮನೆಗೆ ಹೋಗಿದ್ದರು. ನಂತರ ಕಾರಿನಲ್ಲಿ ಅರಕ್ಕೋಣಂಗೆ ಹಿಂತಿರುಗುತ್ತಿದ್ದರು. ರಾತ್ರಿ 9.45ರ ವೇಳೆಗೆ ಕದಂಬತ್ತೂರು ಬಳಿ ಪೂನಮಲ್ಲಿ-ಅರಕ್ಕೋಣಂ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಹೋಗುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಟ್ರಕ್ನ ಚಾಲಕ ತಿರುವಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ್ದ.
ಆಗ ಮನೋಜ್ ಅವರ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಬಿದ್ದಿದ್ದು, ಕಾರು ಅಪ್ಪಚ್ಚಿಯಾಗಿದೆ. ನಂತರ ಎರಡು ಗಂಟೆಗಳ ಕಾಳ ಕಾರ್ಯಾಚರಣೆ ನಡೆಸಿ ಟ್ರಕ್ ಅನ್ನು ಮೇಲೆತ್ತಲಾಯಿತು. ಅಷ್ಟರಲ್ಲಿ ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಮಪ್ಪೆಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಟ್ರಕ್ನ ಚಾಲಕ ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಕುತೂಹಲ ಘಟ್ಟ ತಲುಪಿದ ಬುರುಡೆ ರಹಸ್ಯ

ರಾಜಣ್ಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಟಾರ್ಗೆಟ್‌: ರಾಜುಗೌಡ ಹೊಸ ಬಾಂಬ್‌

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ: ವಿಜಯೇಂದ್ರ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಮುಂದಿನ ಸುದ್ದಿ
Show comments