Webdunia - Bharat's app for daily news and videos

Install App

ಆಸಿಯಾ ಆಂದ್ರಾಬಿ, ಬುರ್ಹಾನ್ ವನಿಯೊಂದಿಗೆ ಸಂಪರ್ಕವಿತ್ತು: ಹಫೀಜ್ ಸಯೀದ್

Webdunia
ಶುಕ್ರವಾರ, 22 ಜುಲೈ 2016 (19:19 IST)
ಫೈರ್‌ಬ್ರ್ಯಾಂಡ್‌ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಆಂದ್ರಾಬಿ ಮತ್ತು ಇತ್ತೀಚೆಗೆ ಸೇನಾಪಡೆಗಳ ಗುಂಡಿಗೆ ಬಲಿಯಾದ ಬುರ್ಹಾನ್ ವನಿಯವರೊಂದಿಗೆ ಸಂಪರ್ಕವಿತ್ತು ಎಂದು ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್ ಖಚಿತಪಡಿಸಿದ್ದಾರೆ.
 
2008 ರ ಮುಂಬೈ ದಾಳಿಯ ರೂವಾರಿಯಾದ ಸಯೀದ್, ಅಂದ್ರಾಬಿ ಸಹೋದರಿಯಂತಿದ್ದು, ದುಖ್ಕತರನ್-ಎ-ಮಿಲ್ಲತ್ ಮುಖ್ಯಸ್ಥೆಯಾಗಿದ್ದಾಳೆ ಎಂದು ಹೊಗಳಿದ್ದಾನೆ. 
 
ದುಖ್ಕತರನ್-ಎ-ಮಿಲ್ಲತ್ ಪ್ರತ್ಯೇಕತಾವಾದಿಗಳ ಸಂಘಟನೆಯಾಗಿದ್ದು ಆಸಿಯಾ ಆಂದ್ರಾಬಿ ಮುಖ್ಯಸ್ಥೆಯಾಗಿದ್ದಾಳೆ. ಪ್ರತಿ ವರ್ಷ ಆಗಸ್ಟ್ 14 ರಂದು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಶ್ಮಿರದಲ್ಲಿ ಪಾಕ್ ಧ್ವಜವನ್ನು ಹಾರಿಸಿ ವಿವಾದ ಸೃಷ್ಟಿಸಿದ್ದಾಳೆ.   
 
ವಿಶ್ವಸಂಸ್ಥೆಯಿಂದ ಭಯೋತ್ಪಾದಕ ಎಂದು ಕರೆಸಿಕೊಂಡ ಸಯೀದ್, ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಭಾಷಣ ಮಾಡುತ್ತಾ ಬುರ್ಹಾನ್ ವನಿ ನನ್ನೊಂದಿಗೆ ಕೊನೆಯ ಬಾರಿ ಮಾತನಾಡುವುದಾಗಿ ಬಯಕೆ ತೋಡಿಕೊಂಡಿದ್ದ ಎಂದು ಹೇಳಿದ್ದಾನೆ.  
 
ತಮ್ಮೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ನಂತರ ನನ್ನ ಬಯಕೆ ಈಡೇರಿದೆ. ನಾನು ಇದೀಗ ಹುತಾತ್ಮನಾಗಲು ಸಿದ್ದವಾಗಿದ್ದೇನೆ ಎಂದು ತಿಳಿಸಿದ್ದಾಗಿ ಹೇಳಿದ್ದಾನೆ.
 
ಜಮ್ಮು ಕಾಶ್ಮಿರದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಲಾಹೋರ್‌ನಿಂದ ಇಸ್ಲಾಮಾಬಾದ್‌ವರೆಗೆ  ನಡೆದ ಕಾಶ್ಮಿರ್ ಕಾರವಾನ್ ರ್ಯಾಲಿಯಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments