Webdunia - Bharat's app for daily news and videos

Install App

ಜಿಹಾದ್‌ನಿಂದಲೇ ಜಮ್ಮು ಕಾಶ್ಮಿರಕ್ಕೆ ಸ್ವಾತಂತ್ರ್ಯ, ಮಾತುಕತೆಯಿಂದಲ್ಲ: ಹಫೀಜ್ ಸಯೀದ್

Webdunia
ಶುಕ್ರವಾರ, 16 ಡಿಸೆಂಬರ್ 2016 (17:39 IST)
ಜಮ್ಮು ಕಾಶ್ಮಿರ ವಿವಾದ ಮಾತುಕತೆಯಿಂದ ಸಾಧ್ಯವಿಲ್ಲ. ಜಿಹಾದ್‌ ಘೋಷಣೆಯೇ ಅದಕ್ಕೆ ಸೂಕ್ತ ಉತ್ತರವಾಗಿದೆ ಎಂದು ಜಾಗತಿಕ ಉಗ್ರಗಾಮಿ ಲಷ್ಕರ್-ಎ-ತೊಯಿಬಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಘೋಷಿಸಿದ್ದಾನೆ.
 
ಲಷ್ಕರ್-ಎ-ತೊಯಿಬಾ ಮತ್ತು ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್, ಪಾಕಿಸ್ತಾನ ಆಕ್ರಮಿತ ಕಾಶ್ಮಿರದಲ್ಲಿ ಯುನೈಟೆಡ್ ಜಿಹಾದಿ ಕೌನ್ಸಿಲ್ ಕಮಾಂಡರ್‌ಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ ಭಾರತದ ವಿರುದ್ಧ ದಾಳಿ ಮುಂದುವರಿಸುವಂತೆ ಕರೆ ನೀಡಿದರು.
 
ಭಾರತದಲ್ಲಿ ಹಲವಾರು ದಾಳಿಗಳ ಹಿಂದಿನ ರೂವಾರಿಯಾದ ಹಫೀಜ್, ಕಾಶ್ಮಿರ ಸ್ವಾತಂತ್ರ್ಯಗೊಳಿಸಲು ಮಾತುಕತೆಯಿಂದ ಸಾಧ್ಯವಿಲ್ಲ. ಅದಕ್ಕೆ ಜಿಹಾದ್ ಸಾರಬೇಕಾಗಿದೆ. ಪಾಕ್ ಪ್ರಧಾನಿಯ ಸಲಹೆಗಾರ ಸರ್ತಾಜ್ ಅಜೀಜ್ ಅವರಿಗೆ ಭಾರತ ಮಾಡಿದ ಅಪಮಾನ ಸಂಪೂರ್ಣ ಪಾಕಿಸ್ತಾನಕ್ಕೆ ಮಾಡಿದ ಅಪಮಾನವಾಗಿದೆ ಎಂದು ಕೆಂಡಕಾರಿದ್ದಾನೆ. 
 
ಜಮ್ಮುವಿನ ಭೌಗೋಳಿಕ ಚಿತ್ರಣವನ್ನು ಬದಲಿಸಿ ಪಾಕಿಸ್ತಾನಕ್ಕೆ ಹರಿಯುವ ನದಿಯ ನೀರನ್ನು ನಿಲ್ಲಿಸಿ ಮೋದಿ, ರಷ್ಯಾದ ಮಿಚೈಲ್ ಗೋರ್ಬೋಚೇವ್ ಅವರಂತೆ ವರ್ತಿಸುತ್ತಿದ್ದಾರೆ ಎಂದು ಪಾಕ್ ಉಗ್ರ ಹಫೀಜ್ ಸಯೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ನೀವೇನೂ ಇಲ್ಲಿ ಬರೋದು ಬೇಡ: ತನ್ನ ಪ್ರಜೆಗಳಿಗೆ ತಾನೇ ಬಾಗಿಲು ತೆರೆಯದ ಪಾಕಿಸ್ತಾನ

ನಾಳೆ ದರ್ಶನ ನೀಡಲಿರುವ ಕೇದಾರನಾಥ, ಭಕ್ತರ ಸುರಕ್ಷತೆಗೆ ಬಿಗಿ ಬಂದೋಬಸ್ತ್‌

ಯುದ್ದವನ್ನು ಗೆದ್ದಿದ್ದೇವೆ ಎಂದು ಭಾವಿಸಬೇಡಿ, ತಕ್ಕ ಉತ್ತರ ನೀಡದೇ ಸುಮ್ಮನಿರಲ್ಲ: ಪಾಕ್‌ಗೆ ಅಮಿತ್ ಶಾ ಎಚ್ಚರಿಕೆ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments