Webdunia - Bharat's app for daily news and videos

Install App

ಭೀಕರ ಕೊಲೆ:ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!

Webdunia
ಭಾನುವಾರ, 21 ನವೆಂಬರ್ 2021 (14:48 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಕೊಲೆ ಮಾಡಿದ ಧಾರುಣ ಘಟನೆ ನಡೆದಿದೆ.
ಈ ಬಾಲಕ ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿದ್ದ. ಆತನಿಗಾಗಿ ಮನೆಯವರು ಸಾಕಷ್ಟು ಹುಡುಕಾಟ ನಡೆಸಿದ್ದರು. ಶನಿವಾರ ಸಿಂಧ್ ಪ್ರಾಂತ್ಯದ ಖಾಯಿರ್ಪುರ ಮಿರ್ ಪ್ರದೇಶದಲ್ಲಿನ ಜನವಸತಿ ಇಲ್ಲದ ಮನೆಯೊಂದರಲ್ಲಿ ಆತನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
'ಇಡೀ ಕುಟುಂಬವು ಗುರು ನಾನಕ್ ಜನ್ಮಜಯಂತಿ ಕಾರ್ಯಕ್ರಮದ ಸಿದ್ಧತೆಯಲ್ಲಿ ಮಗ್ನವಾಗಿತ್ತು. ಹೀಗಾಗಿ ಮಗು ನಾಪತ್ತೆಯಾಗಿರುವುದು ನಮ್ಮ ಯಾರ ಗಮನಕ್ಕೂ ಬಂದಿರಲಿಲ್ಲ. ಆ ಮನೆಯಲ್ಲಿ ರಾತ್ರಿ 11 ಗಂಟೆ ವೇಳೆಗೆ ಅವರ ಶವ ಸಿಕ್ಕಿದೆ' ಎಂದು ಬಾಲಕನ ಸಂಬಂಧಿ ರಾಜ್ ಕುಮಾರ್ ತಿಳಿಸಿದ್ದಾರೆ. 2011ರಲ್ಲಿ ಜನಿಸಿದ್ದ ಆತ, ಐದನೇ ತರಗತಿ ಓದುತ್ತಿದ್ದ. ಈ ಭಯಾನಕ ಘಟನೆಯ ಬಳಿಕ ಇಡೀ ಪ್ರದೇಶದಲ್ಲಿ ಭೀತಿ ವ್ಯಾಪಿಸಿದೆ ಎಂದು ಅವರು ಹೇಳಿದ್ದಾರೆ.
ಬಾಲಕನನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ. ಅದಕ್ಕೂ ಮುನ್ನ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ತಿಳಿಸಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಅದರಲ್ಲಿ ಒಬ್ಬ ಆರೋಪಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಬಾಲಕನ ದೇಹದಲ್ಲಿ ಚಿತ್ರಹಿಂಸೆಯ ಗುರುತುಗಳು ಕೂಡ ಇವೆ. ಈ ಪ್ರಾಂತ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿಯೇ ಇದು ಇಂತಹ ಎರಡನೇ ಪ್ರಕರಣವಾಗಿದೆ ಎಂದು ಮಕ್ಕಳ ರಕ್ಷಣಾ ಪ್ರಾಧಿಕಾರದ ಜುಬೈರ್ ಮಹರ್ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಹಿಂದೂ ಸಮುದಾಯದ ಬಾಲಕಿಯೊಬ್ಬಳು ಸುಕ್ಕೂರ್ ಜಿಲ್ಲೆಯ ಸಲೇಹ್ ಪಾತ್ ಪ್ರಾಂತ್ಯದಿಂದ ನಾಪತ್ತೆಯಾಗಿದ್ದಳು. ಆಕೆಯ ಪತ್ತೆಗೆ 25 ಲಕ್ಷ ರೂ ಬಹುಮಾನವನ್ನು ಪೊಲೀಸರು ಘೋಷಿಸಿದ್ದರು. ಆದರೆ ಅದು ಫಲ ನೀಡಿರಲಿಲ್ಲ ಎಂದು ಮಹರ್ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ