Webdunia - Bharat's app for daily news and videos

Install App

ಬಾಂಗ್ಲಾದಲ್ಲಿ ೧೫ ಹಿಂದೂ ದೇವಾಲಯ ಧ್ವಂಸ....

Webdunia
ಮಂಗಳವಾರ, 1 ನವೆಂಬರ್ 2016 (11:02 IST)
ಢಾಕಾ: ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂಗೆ ಗೌರವ ತೋರದ ಪೋಸ್ಟ್ ಪ್ರಕಟವಾದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಬ್ರಹ್ಮನ್ ಬರಿಯಾ ಜಿಲ್ಲೆಯಲ್ಲಿ ಉದ್ರಿಕ್ತ ದುಷ್ಕರ್ಮಿಗಳ ಗುಂಪೊಂದು 15 ದೇವಾಲಯಗಳನ್ನು ಧ್ವಂಸಗೊಳಿಸಿದೆ. ಜೊತೆಗೆ ನೂರಾರು ಹಿಂದೂಗಳ ಮನೆಯನ್ನು ಲೂಟಿ ಮಾಡಿದ್ದಾರೆ.
 

 
ಬಾಂಗ್ಲಾದಲ್ಲಿ ವಾಸವಾಗಿರುವ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂಗೆ ಗೌರವ ತೋರದಿರುವ ಪೋಸ್ಟ್ ಹಾಕಿದ್ದನು. ಅದನ್ನು ನೋಡಿದ ಸ್ಥಳೀಯ ದುಷ್ಕರ್ಮಿಗಳ ಗುಂಪೊಂದು ಕೈಯ್ಯಲ್ಲಿ ಶಸ್ತ್ರ ಹಿಡಿದು ಅಲ್ಲಿರುವ ಹದಿನೈದು ದೇವಾಲಯಗಳ ಮೇಲೆ ಆಕ್ರಮಣ ನಡೆಸಿದೆ. ದೇವಸ್ಥಾನದ ಪ್ರಾಂಗಣದೊಳಗೆಲ್ಲ ನುಗ್ಗಿ ವಿದ್ವಂಸಕ ಕೃತ್ಯ ಎಸಗಿದೆ. ಗರ್ಭಗುಡಿಯಲ್ಲಿರುವ ಏಳೆಂಟು ವಿಗ್ರಹಗಳನ್ನು ಹಾನಿ ಮಾಡಿದ್ದಾರೆ. ಸಾಲದೆಂಬಂತೆ ಹಿಂದುಗಳ ಮನೆಯೊಳಗೂ ನುಗ್ಗಿ, ಹಣ, ಬಂಗಾರ ಹಾಗೂ ಇನ್ನಿತರ ಉಪಯುಕ್ತ ವಸ್ತುಗಳನ್ನು ಲೂಟಿ ಮಾಡಿದೆ.
 
ಈ ದುರ್ಘಟನೆ ಸಂಬಂಧಿಸಿ ಪೊಲೀಸರು ಸಾವಿರಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಫೇಸ್ ಬುಕ್ ನಲ್ಲಿ ಮುಸ್ಲಿಮರ ಪವಿತ್ರ ಸ್ಥಳವನ್ನು ಲೇವಡಿ ಮಾಡಿದ ಹಿನ್ನೆಲೆಯಲ್ಲಿ ನೂರಾರು ಮುಸ್ಲಿಂ ಯುವಕರು ಈ ದಾಳಿ ನಡೆಸಿದ್ದಾರೆ ಎಂದು ನಸೀರ್ ನಗರ್ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments