ಬಾಂಗ್ಲಾದಲ್ಲಿ ೧೫ ಹಿಂದೂ ದೇವಾಲಯ ಧ್ವಂಸ....

Webdunia
ಮಂಗಳವಾರ, 1 ನವೆಂಬರ್ 2016 (11:02 IST)
ಢಾಕಾ: ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂಗೆ ಗೌರವ ತೋರದ ಪೋಸ್ಟ್ ಪ್ರಕಟವಾದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಬ್ರಹ್ಮನ್ ಬರಿಯಾ ಜಿಲ್ಲೆಯಲ್ಲಿ ಉದ್ರಿಕ್ತ ದುಷ್ಕರ್ಮಿಗಳ ಗುಂಪೊಂದು 15 ದೇವಾಲಯಗಳನ್ನು ಧ್ವಂಸಗೊಳಿಸಿದೆ. ಜೊತೆಗೆ ನೂರಾರು ಹಿಂದೂಗಳ ಮನೆಯನ್ನು ಲೂಟಿ ಮಾಡಿದ್ದಾರೆ.
 

 
ಬಾಂಗ್ಲಾದಲ್ಲಿ ವಾಸವಾಗಿರುವ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂಗೆ ಗೌರವ ತೋರದಿರುವ ಪೋಸ್ಟ್ ಹಾಕಿದ್ದನು. ಅದನ್ನು ನೋಡಿದ ಸ್ಥಳೀಯ ದುಷ್ಕರ್ಮಿಗಳ ಗುಂಪೊಂದು ಕೈಯ್ಯಲ್ಲಿ ಶಸ್ತ್ರ ಹಿಡಿದು ಅಲ್ಲಿರುವ ಹದಿನೈದು ದೇವಾಲಯಗಳ ಮೇಲೆ ಆಕ್ರಮಣ ನಡೆಸಿದೆ. ದೇವಸ್ಥಾನದ ಪ್ರಾಂಗಣದೊಳಗೆಲ್ಲ ನುಗ್ಗಿ ವಿದ್ವಂಸಕ ಕೃತ್ಯ ಎಸಗಿದೆ. ಗರ್ಭಗುಡಿಯಲ್ಲಿರುವ ಏಳೆಂಟು ವಿಗ್ರಹಗಳನ್ನು ಹಾನಿ ಮಾಡಿದ್ದಾರೆ. ಸಾಲದೆಂಬಂತೆ ಹಿಂದುಗಳ ಮನೆಯೊಳಗೂ ನುಗ್ಗಿ, ಹಣ, ಬಂಗಾರ ಹಾಗೂ ಇನ್ನಿತರ ಉಪಯುಕ್ತ ವಸ್ತುಗಳನ್ನು ಲೂಟಿ ಮಾಡಿದೆ.
 
ಈ ದುರ್ಘಟನೆ ಸಂಬಂಧಿಸಿ ಪೊಲೀಸರು ಸಾವಿರಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಫೇಸ್ ಬುಕ್ ನಲ್ಲಿ ಮುಸ್ಲಿಮರ ಪವಿತ್ರ ಸ್ಥಳವನ್ನು ಲೇವಡಿ ಮಾಡಿದ ಹಿನ್ನೆಲೆಯಲ್ಲಿ ನೂರಾರು ಮುಸ್ಲಿಂ ಯುವಕರು ಈ ದಾಳಿ ನಡೆಸಿದ್ದಾರೆ ಎಂದು ನಸೀರ್ ನಗರ್ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments