Webdunia - Bharat's app for daily news and videos

Install App

ದೇವಾಲಯಕ್ಕೆ ನುಗ್ಗಿ ಹಿಂದೂಗಳ ಮೇಲೆ ಸಿಕ್ಕ ಸಿಕ್ಕ ಹಾಗೆ ದಾಳಿ

Krishnaveni K
ಸೋಮವಾರ, 4 ನವೆಂಬರ್ 2024 (10:28 IST)
Photo Credit: X
ಕೆನಡಾ: ದೇವಾಲಯಕ್ಕೆ ನುಗ್ಗಿ ಕೆನಡಾದಲ್ಲಿ ಹಿಂದೂಗಳ ಮೇಲೆ ಸಿಕ್ಕ ಸಿಕ್ಕ ಹಾಗೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದಾರೆ. ಇದನ್ನು ಅಲ್ಲಿನ ರಾಜಕೀಯ ನಾಯಕರು ಖಂಡಿಸಿದ್ದಾರೆ.

ವಿಶೇಷವೆಂದರೆ ಈಗ ಕೆನಡಾ ಮತ್ತು ಭಾರತದ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿದೆ. ಅದರ ನಡುವೆಯೇ ಹಿಂದೂಗಳ ಮೇಲೆ ದಾಳಿ ನಡೆದಿರುವುದು ಗಮನಾರ್ಹ ಸಂಗತಿ. ಖಲಿಸ್ತಾನಿ ಉಗ್ರನ ಹತ್ಯೆ ವಿಚಾರವಾಗಿಯೇ ಎರಡೂ ದೇಶಗಳ ನಡುವಿನ ಸಂಬಂಧ ಹಳಸಿತ್ತು. ಇದೀಗ ಖಲಿಸ್ತಾನಿ ಹೋರಾಟಗಾರರಿಂದ ಹಿಂದೂಗಳ ಮೇಲೆ ದಾಳಿಯಾಗಿದೆ.

ಕೆನಡಾದ ಬ್ರಾಂಪ್ಟನ್ ನಲ್ಲಿರುವ ಹಿಂದೂ ಸಭಾ ದೇವಾಲಯದ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆನಡಾ ಸಂಸದ ಪಿರ್ರೆ ಪೊಲಿವ್ರೆ, ಸಂಸದ ಕೆವಿನ್ ವೂಂಗ್, ಸಂಸದ ಆರ್ಯ ‘ನಾವು ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲರಾದೆವು’ ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಕೆನಡಾದಲ್ಲಿ ನಡೆದ ಹಿಂದೂಗಳ ಮೇಲಿನ ದಾಳಿ ಖಂಡಿಸಿರುವ ಭಾರತ, ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದೆ.  ಸಂಸದ ಕೆವಿನ್ ದಾಳಿ ಬಗ್ಗೆ ಪ್ರತಿಕ್ರಿಯಿಸಿ ನಮ್ಮ ದೇಶ ಈಗ ತೀವ್ರಗಾಮಿಗಳ ಸ್ವರ್ಗವಾಗಿದೆ. ಇಲ್ಲಿ ಎಲ್ಲಾ ಧರ್ಮದವರೂ ಶಾಂತಿಯುತವಾಗಿ ಬಾಳುವಂತಾಗಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments