Webdunia - Bharat's app for daily news and videos

Install App

ಸಂಬಳ ಕೇಳಿದ ಬಾಲಕನ ಕೈ ಕತ್ತರಿಸಿಹಾಕಿದ ಮಹಿಳೆ

Webdunia
ಬುಧವಾರ, 10 ಮೇ 2017 (19:12 IST)
ಮಕ್ಕಳ ಮೇಲೆ ದೌರ್ಜನ್ಯಗಳ ಮತ್ತೊಂದು ಭೀಕರವಾದ ಪ್ರಕರಣದಲ್ಲಿ, ಮಾಲೀಕಳೊಬ್ಬಳು ವೇತನ ಕೇಳಿದ  13 ವರ್ಷ ವಯಸ್ಸಿನ ಮನೆಕೆಲಸಗಾರನಾಗಿದ್ದ ಬಾಲಕನ ಕೈಯನ್ನು ಕತ್ತರಿಸಿ ಹಾಕಿದ ಹೇಯ ಘಟನೆ ವರದಿಯಾಗಿದೆ.
 
ಮಾಧ್ಯಮ ವರದಿಗಳ ಪ್ರಕಾರ, ಇರ್ಫಾನ್ ಎಂದು ಗುರುತಿಸಲಾಗಿರುವ ಬಾಲಕ, ಸಫ್ದಾರಾಬಾದ್‌ನಲ್ಲಿರುವ ಶಫ್ಖತ್ ಬೀಬಿ ಎನ್ನುವವರ ಮನೆಯಲ್ಲಿ 3 ಸಾವಿರ ರೂ. ವೇತನಕ್ಕಾಗಿ ಉದ್ಯೋಗ ಮಾಡುತ್ತಿದ್ದ ಎಂದು ಬಾಲಕನ ತಾಯಿ ಜನ್ನಾತ್ ಬೀಬಿ ಪೊಲೀಸರಿಗೆ ತಿಳಿಸಿದ್ದಾರೆ.
 
ಕಳೆದ ವಾರ ಜಾನುವಾರುಗಳಿಗೆ ಮೇವು ತಿನ್ನಿಸುವ ಕೆಲಸವನ್ನು ಪೂರ್ಣಗೊಳಿಸದೆ ಸಂಬಂಳ ನೀಡುವಂತೆ ಬಾಲಕ ಇರ್ಫಾನ್ ಒತ್ತಾಯಿಸಿರುವುದು ಮನೆಯ ಮಾಲೀಕಳಾದ ಶಫ್ಖತ್ ಬೀಬಿಗೆ ಕೋಪ ತರಿಸಿದೆ. ಕೋಪದ ಭರದಲ್ಲಿ ಮೇವು ಕತ್ತರಿಸುವ ಯಂತ್ರದಿಂದ ಬಾಲಕನ ಬಲಗೈ ಕತ್ತರಿಸಿ ಪಾಠ ಕಲಿಸಿದ್ದಾಳೆ. 
 
ಲಾಹೋರ್‌ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಶೇಖುಪುರ್ ಗ್ರಾಮದಲ್ಲಿ ಇಂತಹ ಹೇಯ ಘಟನೆ ನಡೆದಿದೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ಆತನ ತಾಯಿ ಜನ್ನತ್ ಬೀಬಿ ತಿಳಿಸಿದ್ದಾರೆ.
 
ಆದಾಗ್ಯೂ, ಸಫ್ದರಾಬಾದ್ ಪೊಲೀಸರು ಪ್ರಕರಣವನ್ನು ನೋಂದಾಯಿಸಲು ನಿರಾಕರಿಸಿದರು. ಕುಟುಂಬದವರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ ಬಳಿಕ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿ ದೂರು ನೀಡಿದ ನಂತರ. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಪೊಲೀಸರಿಗೆ ನಿರ್ದೇಶಿಸಿತು.
 
ಬುಧವಾರ ಪೊಲೀಸರು ಶಾಫ್ಖತ್ ಬೀಬಿ, ಅವರ ಸಹೋದರ ಜಾಫರ್ ತಾರರ್ ಮತ್ತು ಇನ್ನಿತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಂತರ, ಅವಳ ಸಹೋದರನನ್ನು ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments