Webdunia - Bharat's app for daily news and videos

Install App

ಇಸ್ರೇಲ್, ಇರಾನ್ ನಡುವಿನ ಯುದ್ಧ ಭಾರತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ನೋಡಿ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (10:21 IST)
ನವದೆಹಲಿ: ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇಸ್ರೇಲ್ ಕೂಡಾ ಪ್ರತಿದಾಳಿ ಮಾಡುತ್ತಿದೆ. ಮಧ್ಯ ಪೂರ್ವ ರಾಷ್ಟ್ರದಲ್ಲಿ ತಲೆದೋರಿರುವ ಈ ಬಿಕ್ಕಟ್ಟು ಭಾರತದ ಮೇಲೆ ಹೇಗೆ ಪರಿಣಾಮ ಬೀರಬಹುದು ನೋಡಿ.

ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆದಾಗ ಭಾರತದ ಮೇಲೆ ನೇರ ಪರಿಣಾಮ ಬೀರದು ಎಂದು ಹೇಳಿದರೂ ಜಗತ್ತು ಪ್ರತೀ ವಿಚಾರದಲ್ಲೂ ಒಂದಕ್ಕೊಂದು ಲಿಂಕ್ ಆಗಿಯೇ ಇದೆ. ಹೀಗಾಗಿ ಭಾರತಕ್ಕೆ ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಯುದ್ಧದ ಇಫೆಕ್ಟ್ ಕಂಡುಬರಲಿದೆ. ಅದರಲ್ಲೂ ಇಸ್ರೇಲ್ ಜೊತೆಗೆ ಅಮೆರಿಕಾ, ಬ್ರಿಟನ್ ನಂತಹ ರಾಷ್ಟ್ರಗಳು ನಿಂತಿದ್ದು ಮೂರನೇ ಮಹಾಯುದ್ಧವೇನಾದರೂ ಸಂಭವಿಸಿದರೆ ಭಾರತಕ್ಕೆ ಅದರ ಪರಿಣಾಮ ಖಂಡಿತಾ ಉಂಟಾಗಲಿದೆ.

ಸದ್ಯಕ್ಕೆ ಭಾರತಕ್ಕೆ ಈ ಎರಡು ರಾಷ್ಟ್ರಗಳ ಕದನದಿಂದಾಗಿ ಪರಿಣಾಮ ಬೀರುವುದು ಷೇರು ಮಾರುಕಟ್ಟೆ ಕ್ಷೇತ್ರದಲ್ಲಿ. ನಿನ್ನೆಯೇ ಕ್ಷಿಪಣಿ ದಾಳಿಗಳ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿತ್ತು. ಇದರ ಬಿಸಿ ಭಾರತ, ಚೀನಾದಂತಹ ರಾಷ್ಟ್ರಗಳಿಗೂ ತಟ್ಟಿತ್ತು.

ಮಧ್ಯಪೂರ್ವ ರಾಷ್ಟ್ರಗಳ ಆರ್ಥಿಕ ಕಾರಿಡಾರ್ ನಲ್ಲಿ ಸಾಗುವ ಸರಕು ಸಾಗಣೆ ಹಡಗುಗಳ ಸಂಚಾರಕ್ಕೆ ತೊಂದರೆಯಾಗಬಹುದು. ಇದು ಜಾಗತಿಕವಾಗಿ ಸರಕು ಹಡಗುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು ಭಾರತಕ್ಕೂ ಪರಿಣಾಮ ಬೀರಲಿದೆ. ಕೆಂಪು ಸಮುದ್ರದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಭಾರತದ ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಕಾರ್ಯಕ್ಕೆ ತೊಂದರೆಗಳಾಗಿವೆ. ಇದರಿಂದಾಗಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಅನ್ಯ ಮಾರ್ಗಗಳನ್ನು ಹುಡುಕಬೇಕಾಗಿದೆ. ಇದರಿಂದ ಸಾಗಣೆ ವೆಚ್ಚ ಹೆಚ್ಚಾಗುತ್ತಿದೆ. ಈ ಎರಡು ರಾಷ್ಟ್ರಗಳ ನಡುವಿನ ಕದನದಿಂದಾಗಿ ಭಾರತ-ಮಧ್ಯ ಪೂರ್ವ-ಯುರೋಪ್ ಆರ್ಥಿಕ ಕಾರಿಡಾರ್ ಅಭಿವೃದ್ಧಿಗೆ ಹೊಡೆತ ಬೀಳುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಕೊವಿಡ್ ವ್ಯಾಕ್ಸಿನ್ ಬಗ್ಗೆ ಸಿಎಂ ಹೇಳಿಕೆಗೇ ಸೆಡ್ಡು ಹೊಡೆದಂತಿದೆ ಆರೋಗ್ಯ ಸಚಿವರ ಹೇಳಿಕೆ

ಸಿಎಂ ಕುರ್ಚಿಗೆ ಡಿಕೆ ಶಿವಕುಮಾರ್ ಗೆ ಅಡ್ಡಿಯಾಗ್ತಿರೋರು ಯಾರು ಎಂದ ಬಿಜೆಪಿ

ಭಂಡ ಬಾಳು ಬಿಟ್ಟು ರಾಜೀನಾಮೆ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ
Show comments