Webdunia - Bharat's app for daily news and videos

Install App

ಭಾರತದಲ್ಲಿ ಬದುಕುವಾಸೆ ಎಂದ ಐಎಸ್ಐ ಏಜೆಂಟ್! ಮುಂದೇನಾಯ್ತು ನೀವೇ ಓದಿ!

Webdunia
ಶನಿವಾರ, 29 ಏಪ್ರಿಲ್ 2017 (07:50 IST)
ನವದೆಹಲಿ: ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಿಚಿತ್ರ ಘಟನೆಯೊಂದು ನಡೆಯಿತು. ಪ್ರಯಾಣಿಕರೊಬ್ಬರು ತಾನು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಏಜೆಂಟ್ ಎಂದು ಅಧಿಕಾರಿಗಳ ಕೈವಶವಾಗಿದ್ದಾರೆ.

 
ದುಬೈನಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕ ನೇಪಾಳದ ಕಠ್ಮಂಡುವಿಗೆ ಟಿಕೆಟ್ ಬುಕ್ ಮಾಡಿದ್ದ. ಆದರೆ ನಂತರ ಮನಸ್ಸು ಬದಲಾಯಿಸಿ ನೇರ ವಿಮಾನ ನಿಲ್ದಾಣದ ಹೆಲ್ಪ್ ಡೆಸ್ಕ್ ಗೆ ತೆರಳಿ ಅಲ್ಲಿದ್ದ ಮಹಿಳಾ ಅಧಿಕಾರಿಗೆ ನಾನು ಐಎಸ್ಐ ಏಜೆಂಟ್. ಇನ್ನು ಅದರ ಸಹವಾಸ ಸಾಕೆನಿಸಿದೆ. ಭಾರತದಲ್ಲೇ ನೆಲೆಸಲು ಬಯಸುತ್ತೇನೆ ಎಂದಿದ್ದಾರೆ.

ಏಕಾ ಏಕಿ ಪ್ರಯಾಣಿಕರೊಬ್ಬರು ಈ ರೀತಿ ಹೇಳುತ್ತಿರುವುದನ್ನು ನೋಡಿ ಗಲಿಬಿಲಿಗೊಂಡ ಮಹಿಳಾ ಅಧಿಕಾರಿ, ಸಾವರಿಸಿಕೊಂಡು ತಕ್ಷಣ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾಳೆ. ತಕ್ಷಣ ಅಧಿಕಾರಿಗಳು ಪ್ರಯಾಣಿಕನನ್ನು ವಿಚಾರಣೆಗೊಳಪಡಿಸಿದ್ದಾರೆ.

ಈತನ ಹೆಸರು ಮೊಹಮ್ಮದ್ ಅಹ್ಮದ್ ಶೇಕ್ ಮೊಹಮ್ಮದ್ ರಫೀಕ್ ಎಂದು ತಿಳಿದು ಬಂದಿದೆ. ಈತನ ಬಳಿ ಪಾಕ್ ಪಾಸ್ ಪೋರ್ಟ್ ಇತ್ತು. ಆದರೆ ಆತ ಹೇಳಿದಂತೆ ಐಎಸ್ಐ ಏಜೆಂಟ್ ಹೌದೋ, ಅಲ್ಲವೋ ಎಂದು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಎಂದು ಹೆಸರಿಟ್ಟ ನಿತಿನ್ ಗಡ್ಕರಿ

ಮುಂದಿನ ಸುದ್ದಿ