Webdunia - Bharat's app for daily news and videos

Install App

ಐಸಿಜೆ ಮಹತ್ವದ ತೀರ್ಪು: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಡೆ

Webdunia
ಗುರುವಾರ, 18 ಮೇ 2017 (16:02 IST)
ಪಾಕಿಸ್ತಾನ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್‌ಗೆ ವಿಧಿಸಿದ ಗಲ್ಲು ಶಿಕ್ಷೆಗೆ ನೆಗರ್‌ಲ್ಯಾಂಡ್‌ನ ಹೇಗ್‌ ನಗರದಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಮೂರ್ತಿ ರೋನಿ ಅಬ್ರಹಾಂ, ತಡೆ ನೀಡಿ ಆದೇಶ ಹೊರಡಿಸಿದ್ದಾರೆ.
 
ಭಾರತದ ಮನವಿಯನ್ನು ಎತ್ತಿಹಿಡಿದ ಇಂಟರ್‌ನ್ಯಾಷನಲ್ ಕೋರ್ಟ್ ಫಾರ್ ಜಸ್ಟಿಸ್(ಐಸಿಜೆ) ಅಂತಿಮ ತೀರ್ಪು ಬರುವವರೆಗೆ ಜಾಧವ್‌ರನ್ನು ಗಲ್ಲಿಗೇರಿಸುವಂತಿಲ್ಲ ಎಂದು  ಆದೇಶದಲ್ಲಿ ತಿಳಿಸಿದೆ. ಇದರಿಂದ ಭಾರತಕ್ಕೆ ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಐತಿಹಾಸಿಕ ಜಯ ದೊರೆತಂತಾಗಿದೆ.
 
ಜಾಧವ್‌ಗೆ ಗಲ್ಲು ಶಿಕ್ಷೆ ಜಾರಿಯಾಗದಂತೆ ಪಾಕಿಸ್ತಾನ ಸರಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಅಬ್ರಾಹಂ ನೀಡಿದ ಆದೇಶ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ.
 
ಕುಲಭೂಷಣ್ ಪ್ರಾಣಕ್ಕೆ ಅಪಾಯವಿದೆ ಎನ್ನುವ ಭಾರತದ ವಾದಕ್ಕೆ ಸಹಮತ ವ್ಯಕ್ತಪಡಿಸಿದ ಕೋರ್ಟ್, ಜಾಧವ್‌ಗೆ ಸೂಕ್ತ ಭದ್ರತೆ ನೀಡುವಂತೆ ಆದೇಶಿಸಿದೆ.
 
ಐಸಿಜೆ ತೀರ್ಪಿನಿಂದ ಕುಗ್ಗಿರುವ ಪಾಕಿಸ್ತಾನ, ಜಾಧವ್ ಪ್ರಕರಣ ಐಸಿಜೆ ವ್ಯಾಪ್ತಿಗೆ ಬರುವುದಿಲ್ಲ. ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದ್ದರಿಂದ ವಿಶ್ವಸಂಸ್ಥೆ ವ್ಯಾಪ್ತಿಗೆ ಬರುತ್ತದೆ ಎಂದು ಪ್ರಕರಣ ತಿರುಚಲು ಪ್ರಯತ್ನಿಸಿತು. ಆದರೆ, ನ್ಯಾಯಮೂರ್ತಿ ಪಾಕ್ ವಾದಕ್ಕೆ ಸಹಮತ ವ್ಯಕ್ತಪಡಿಸಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments