Webdunia - Bharat's app for daily news and videos

Install App

ಬಿಎಸ್ ಎಫ್ ಯೋಧನನ್ನು ಕೊಂದಿದ್ದ ನಾವಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವರಸೆ

Webdunia
ಶನಿವಾರ, 22 ಸೆಪ್ಟಂಬರ್ 2018 (09:51 IST)
ಇಸ್ಲಾಮಾಬಾದ್: ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾದ ಮೇಲೆ ಭಾರತದ ಜತೆಗಿನ ಆ ದೇಶದ ದೃಷ್ಟಿಕೋನ ಬದಲಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದೆಲ್ಲಾ ಈಗ ಸುಳ್ಳಾಗಿದೆ.

ಮೊನ್ನೆಯಷ್ಟೇ ಜಮ್ಮು ಕಾಶ್ಮೀರದ ಗಡಿಯಲ್ಲಿ ಯೋಧ ನರೇಂದ್ರ ಕುಮಾರ್ ನನ್ನು ಪಾಕ್ ಯೋಧರು ಕತ್ತು ಸೀಳಿ, ಕಣ್ಣು ಕಿತ್ತು, ಗುಂಡು ಹಾರಿಸಿ ಪೈಶಾಚಿಕವಾಗಿ ಕೊಲೆ ಮಾಡಿದ್ದರು. ಆದರೆ ಈ ಹತ್ಯೆ ಮಾಡಿದ್ದು ನಾವಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಳೇ ನಾಯಕರಂತೆ ವರಸೆ ತೆಗೆದಿದ್ದಾರೆ.

ಉಭಯ ದೇಶಗಳ ನಡುವಿನ ವಿದೇಶಾಂಗ ಸಚಿವರ ಮಾತುಕತೆಗೆ ಆಹ್ವಾನಿಸಿ ಪ್ರಧಾನಿ ಮೋದಿಗೆ ಇಮ್ರಾನ್ ಖಾನ್ ಪತ್ರ ಬರೆದಿದ್ದರು. ಇದನ್ನು ಭಾರತ ತಿರಸ್ಕರಿಸಿದ ಬೆನ್ನಲ್ಲೇ ಇಮ್ರಾನ್ ಈ ರೀತಿ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಭಾರತ ಈ ಮಾತುಕತೆ ತಿರಸ್ಕರಿಸುವ ಮೂಲಕ ಮಹತ್ವದ ಅವಕಾಶವೊಂದನ್ನು ಕಳೆದುಕೊಂಡಿದೆ ಎಂದು ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments