Webdunia - Bharat's app for daily news and videos

Install App

ಭಾರತ-ಚೀನಾ ಮಾತುಕತೆ: ರಸ್ತೆ ನಿರ್ಮಿಸದಂತೆ ಭಾರತಕ್ಕೆ ಆಗ್ರಹಿಸಿದ ಚೀನಾ

Webdunia
ಭಾನುವಾರ, 7 ಜೂನ್ 2020 (09:40 IST)
ನವದೆಹಲಿ: ಲಡಾಖ್ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಸರಿಪಡಿಸಲು ಭಾರತ ಮತ್ತು ಚೀನಾ ಪರಸ್ಪರ ಸೇನಾಧಿಕಾರಿಗಳ ಮಟ್ಟದಲ್ಲಿ ನಿನ್ನೆ ಸಭೆ ನಡೆಸಿದೆ. ಈ ಸಭೆಯಲ್ಲಿ ಭಾರತಕ್ಕೆ ಗಡಿಯಲ್ಲಿ ರಸ್ತೆ ನಿರ್ಮಿಸದಂತೆ ಚೀನಾ ಆಗ್ರಹಿಸಿದರೆ ಭಾರತ ಸೇನೆ ಹಿಂದಕ್ಕೆ ಕರೆಸಿಕೊಳ್ಳಲು ಬೇಡಿಕೆಯಿಟ್ಟಿದೆ.


ಲೆಫ್ಟಿನೆಂಟ್ ಜನರಲ್ ಶ್ರೇಯಾಂಕದ ಅಧಿಕಾರಿಗಳ ನಡುವೆ ನಿನ್ನೆ ವಿವಾದಿತ ಪ್ರದೇಶದಲ್ಲಿ ಮಹತ್ವದ ಮಾತುಕತೆ ನಡೆದಿದೆ. ಈ ವೇಳೆ ಗಡಿಯಲ್ಲಿ ಉಂಟಾಗಿರುವ ಪರಿಸ್ಥಿತಿ ತಿಳಿಗೊಳಿಸಲು ಎರಡೂ ರಾಷ್ಟ್ರಗಳು ತಮ್ಮ ತಮ್ಮ ಬೇಡಿಕೆ ಮುಂದಿಟ್ಟಿದೆ.

ಇತ್ತ ಭಾರತ 2020 ಏಪ್ರಿಲ್ ನ ಸ್ಥಿತಿ ಕಾಯ್ದುಕೊಳ್ಳುವಂತೆ ಮತ್ತು ಗಡಿ ಬಳಿ ಜಮಾಯಿಸುವ ಚೀನಾ ಸೇನೆ ಹಿಂದಕ್ಕೆ ಸರಿಸುವಂತೆ ಬೇಡಿಕೆಯಿಟ್ಟಿದೆ. ಅತ್ತ ಚೀನಾ ಭಾರತ ತನ್ನ ಗಡಿ ಬಳಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದೆ. ಆದರೆ ತಾನು ರಸ್ತೆ ನಿರ್ಮಿಸುತ್ತಿರುವುದು ಗಡಿರೇಖೆಯೊಳಗೇ. ಹೀಗಾಗಿ ಇದು ಗಡಿ ನಿಯಮದ ಉಲ್ಲಂಘನೆಯಾಗುವುದಿಲ್ಲ. ನಮ್ಮ ಭೂಭಾಗದಲ್ಲಿ ರಸ್ತೆ ನಿರ್ಮಿಸುವುದನ್ನು ಪ್ರಶ್ನಿಸುವ ಹಾಗಿಲ್ಲ ಎಂದು ಖಡಕ್ ಆಗಿ ಹೇಳಿದೆ.

ಈ ಮಾತುಕತೆ ಬಗ್ಗೆ ವಿದೇಶಾಂಗ ಇಲಾಖೆಗೆ ಸೇನಾಧಿಕಾರಿಗಳು ಮಾಹಿತಿ ನೀಡಲಿವೆ. ಈ ಮಾತುಕತೆ ಮತ್ತಷ್ಟು ಸುತ್ತಿನಲ್ಲಿ ನಡೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments