Webdunia - Bharat's app for daily news and videos

Install App

ಭಾರತ-ಚೀನಾ ಮಾತುಕತೆ: ರಸ್ತೆ ನಿರ್ಮಿಸದಂತೆ ಭಾರತಕ್ಕೆ ಆಗ್ರಹಿಸಿದ ಚೀನಾ

Webdunia
ಭಾನುವಾರ, 7 ಜೂನ್ 2020 (09:40 IST)
ನವದೆಹಲಿ: ಲಡಾಖ್ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಸರಿಪಡಿಸಲು ಭಾರತ ಮತ್ತು ಚೀನಾ ಪರಸ್ಪರ ಸೇನಾಧಿಕಾರಿಗಳ ಮಟ್ಟದಲ್ಲಿ ನಿನ್ನೆ ಸಭೆ ನಡೆಸಿದೆ. ಈ ಸಭೆಯಲ್ಲಿ ಭಾರತಕ್ಕೆ ಗಡಿಯಲ್ಲಿ ರಸ್ತೆ ನಿರ್ಮಿಸದಂತೆ ಚೀನಾ ಆಗ್ರಹಿಸಿದರೆ ಭಾರತ ಸೇನೆ ಹಿಂದಕ್ಕೆ ಕರೆಸಿಕೊಳ್ಳಲು ಬೇಡಿಕೆಯಿಟ್ಟಿದೆ.


ಲೆಫ್ಟಿನೆಂಟ್ ಜನರಲ್ ಶ್ರೇಯಾಂಕದ ಅಧಿಕಾರಿಗಳ ನಡುವೆ ನಿನ್ನೆ ವಿವಾದಿತ ಪ್ರದೇಶದಲ್ಲಿ ಮಹತ್ವದ ಮಾತುಕತೆ ನಡೆದಿದೆ. ಈ ವೇಳೆ ಗಡಿಯಲ್ಲಿ ಉಂಟಾಗಿರುವ ಪರಿಸ್ಥಿತಿ ತಿಳಿಗೊಳಿಸಲು ಎರಡೂ ರಾಷ್ಟ್ರಗಳು ತಮ್ಮ ತಮ್ಮ ಬೇಡಿಕೆ ಮುಂದಿಟ್ಟಿದೆ.

ಇತ್ತ ಭಾರತ 2020 ಏಪ್ರಿಲ್ ನ ಸ್ಥಿತಿ ಕಾಯ್ದುಕೊಳ್ಳುವಂತೆ ಮತ್ತು ಗಡಿ ಬಳಿ ಜಮಾಯಿಸುವ ಚೀನಾ ಸೇನೆ ಹಿಂದಕ್ಕೆ ಸರಿಸುವಂತೆ ಬೇಡಿಕೆಯಿಟ್ಟಿದೆ. ಅತ್ತ ಚೀನಾ ಭಾರತ ತನ್ನ ಗಡಿ ಬಳಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದೆ. ಆದರೆ ತಾನು ರಸ್ತೆ ನಿರ್ಮಿಸುತ್ತಿರುವುದು ಗಡಿರೇಖೆಯೊಳಗೇ. ಹೀಗಾಗಿ ಇದು ಗಡಿ ನಿಯಮದ ಉಲ್ಲಂಘನೆಯಾಗುವುದಿಲ್ಲ. ನಮ್ಮ ಭೂಭಾಗದಲ್ಲಿ ರಸ್ತೆ ನಿರ್ಮಿಸುವುದನ್ನು ಪ್ರಶ್ನಿಸುವ ಹಾಗಿಲ್ಲ ಎಂದು ಖಡಕ್ ಆಗಿ ಹೇಳಿದೆ.

ಈ ಮಾತುಕತೆ ಬಗ್ಗೆ ವಿದೇಶಾಂಗ ಇಲಾಖೆಗೆ ಸೇನಾಧಿಕಾರಿಗಳು ಮಾಹಿತಿ ನೀಡಲಿವೆ. ಈ ಮಾತುಕತೆ ಮತ್ತಷ್ಟು ಸುತ್ತಿನಲ್ಲಿ ನಡೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments