ಬೆನ್ನಿಗೆ ಚೂರಿ ಹಾಕಿದರೂ ಮಾಲ್ಡೀವ್ಸ್ ಕೈ ಬಿಡದ ಭಾರತ

Krishnaveni K
ಮಂಗಳವಾರ, 20 ಫೆಬ್ರವರಿ 2024 (10:19 IST)
Photo Courtesy: Twitter
ನವದೆಹಲಿ: ಚೀನಾ ಜೊತೆ ಸೇರಿಕೊಂಡು ಮಸಲತ್ತು ಮಾಡಿದರೂ ಭಾರತ ಮಾತ್ರ ನೆರೆಯ ಮಾಲ್ಡೀವ್ಸ್ ದೇಶಕ್ಕೆ ನೀಡುವ ನೆರವು ನಿಲ್ಲಿಸಿಲ್ಲ.

ಇತ್ತೀಚೆಗೆ ಮಾಲ್ಡೀವ್ಸ್ ನಲ್ಲಿರುವ ಭಾರತೀಯ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಅಲ್ಲಿನ ಸರ್ಕಾರ ಆದೇಶಿಸಿತ್ತು. ಜೊತೆಗೆ ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯನ್ನು ಅಲ್ಲಿನ ಸಚಿವರು ಅಣಕಿಸಿದ್ದರು. ಇದಾದ ಬಳಿಕ ಬಾಯ್ಕಾಟ್ ಮಾಲ್ಡೀವ್ಸ್ ಟ್ರೆಂಡ್ ಶುರುವಾಯಿತು. ಇದಾದ ಬಳಿಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹಳಸಿತ್ತು.

ಹಾಗಿದ್ದರೂ ಭಾರತ ಮಾತ್ರ ನೆರೆಯ ರಾಷ್ಟ್ರದಲ್ಲಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯವನ್ನು ನಿಲ್ಲಿಸಿಲ್ಲ. ಮಾಲ್ಡೀವ್ಸ್ ನಲ್ಲಿ ಸುಮಾರು 771 ಕೋಟಿ ರೂ.ಗಳ ಅಭಿವೃದ್ಧಿ ಕೆಲಸಗಳಿಗೆ ಭಾರತ ಬಂಡವಾಳ ಹೂಡಿದೆ ಮತ್ತು ಅದನ್ನು ಈಗಲೂ ಮುಂದುವರಿಸಿದೆ. ಇದು ನೆರೆಯ ರಾಷ್ಟ್ರಕ್ಕೆ ನೀಡಿದ ವಾಗ್ದಾನವನ್ನು ಉಳಿಸಿಕೊಳ್ಳುವ ಭಾರತದ ಬದ್ಧತೆಗೆ ಸಾಕ್ಷಿಯಾಗಿದೆ.

ಮಾಲ್ಡೀವ್ಸ್ ನಲ್ಲಿ ಸೇತುವೆ ನಿರ್ಮಾಣ, ಎರಡು ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಭಾರತ ಹಣಕಾಸಿನ ಸಹಾಯ ಮಾಡುತ್ತಿದೆ. ಅತ್ತ ಚೀನಾ ಜೊತೆ ಸೇರಿಕೊಂಡು ನಮ್ಮ ದೇಶದ ವಿರುದ್ಧವೇ ಮಾಲ್ಡೀವ್ಸ್ ಮಸಲತ್ತು ಮಾಡುತ್ತಿದ್ದರೂ ಭಾರತ ಮಾತ್ರ ಸಹಾಯ ನಿಲ್ಲಿಸಿಲ್ಲ.

ಭಾರತ ಇಷ್ಟೆಲ್ಲಾ ಸಹಾಯ ಮಾಡುತ್ತಿದ್ದರೂ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮೊಯಿಝು ನಮ್ಮ ಶತ್ರು ರಾಷ್ಟ್ರವಾದ ಚೀನಾಕ್ಕೆ ಭೇಟಿ ನೀಡಿದೆಯಷ್ಟೇ ಹೊರತು ಭಾರತಕ್ಕೆ ಭೇಟಿ ನೀಡು ಧನ್ಯವಾದ ಸಲ್ಲಿಸುವ ಸೌಜನ್ಯವನ್ನೂ ತೋರಿಲ್ಲ. ಸಂಬಂಧ ಹಳಸಿದರೂ ಸದ್ಯಕ್ಕೆ ಭಾರತದ ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ
Show comments