Webdunia - Bharat's app for daily news and videos

Install App

ನಮ್ಮ ನದಿ, ನಮ್ಮ ಹಕ್ಕು: ಇನ್ಮುಂದೆ ಪಾಕಿಸ್ತಾನಕ್ಕೆ ಹೋಗಲ್ಲ ನಮ್ಮ ರಾವಿ ನದಿ ನೀರು

Krishnaveni K
ಮಂಗಳವಾರ, 27 ಫೆಬ್ರವರಿ 2024 (09:47 IST)
ಶ್ರೀನಗರ: ಇಷ್ಟು ದಿನ ನಮ್ಮ ದೇಶದಿಂದ ಹರಿದುಹೋಗುತ್ತಿದ್ದ ನದಿ ನೀರನ್ನೇ ಬಳಸಿ ನಮಗೇ ದ್ರೋಹ ಬಗೆಯುತ್ತಿದ್ದ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುವ ಸಮಯ ಬಂದಿದೆ.

ಪಂಜಾಬ್ ನ ಶಹಪುರ ಅಣೆಕಟ್ಟು ನಿರ್ಮಾಣ ಕಾರ್ಯ ಪೂರ್ತಿಗೊಂಡಿದ್ದು, ಇನ್ನು ಪಾಕಿಸ್ತಾನಕ್ಕೆ ಹರಿಯುತ್ತಿದ್ದ ರಾವಿ ನದಿ ನೀರು ಬಂದ್ ಆಗಲಿದೆ. ಇದು ಇನ್ನು ಭಾರತದಲ್ಲೇ ಉಳಿಯಲಿದೆ. ಕಳೆದ 45 ವರ್ಷಗಳಿಂದ ಪಾಕಿಸ್ತಾನಕ್ಕೆ ವೃಥಾ ಹರಿದು ಹೋಗುತ್ತಿದ್ದ ನೀರು ಬಂದ್ ಆಗಲಿದ್ದು, ಜಮ್ಮು ಕಾಶ್ಮೀರದ ಕೃಷಿ ಕಾರ್ಯಗಳಿಗೆ ಬಳಕೆಯಾಗಲಿದೆ.

ವಿಶ್ವಸಂಸ್ಥೆ ಮಧ‍್ಯಸ್ಥಿಕೆಯಲ್ಲಿ 1960 ರಲ್ಲಿ ಭಾರತ-ಪಾಕಿಸ್ತಾನ ನಡುವೆ ಒಪ್ಪಂದವೊಂದು ನಡೆದಿತ್ತು. ಅದರಂತೆ ರಾವಿ, ಸಟ್ಲೆಜ್, ಬಿಯಾಸ್ ನದಿಗಳ ಮೇಲೆ ಭಾರತಕ್ಕೆ ಸಂಪೂರ್ಣ ನಿಯಂತ್ರಣವಿರಲಿದೆ. ಅದರಂತೆ ಪಾಕಿಸ್ತಾನಕ್ಕೆ ಅನಗತ್ಯವಾಗಿ ಹರಿದುಹೋಗುತ್ತಿದ್ದ ರಾವಿ ನದಿ ನೀರನ್ನು ತಡೆಯಲು ಪಂಜಾಬ್ ನಲ್ಲಿ ಶಹಪುರ ಕಂಡಿ, ಪಂಜಾಬ್-ಜಮ್ಮು ಕಾಶ್ಮೀರ ಗಡಿ ಭಾಗದಲ್ಲಿ ರಣಜಿತ್ ಸಾಗರ್ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾಗಿತ್ತು. 1995 ರಲ್ಲಿ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭವಾಗಿತ್ತು. ಅದೀಗ ಬರೋಬ್ಬರಿ 29 ವರ್ಷಗಳ ಬಳಿಕ ಪೂರ್ಣಗೊಂಡಿದೆ.

ಈ ಅಣೆಕಟ್ಟು ನಿರ್ಮಾಣದಿಂದಾಗಿ ಪಾಕಿಸ್ತಾನಕ್ಕೆ ಅನಗತ್ಯವಾಗಿ ಹರಿಯುತ್ತಿದ್ದ ನೀರು ತಡೆದು ಇನ್ನು ಮುಂದೆ ಅದರ ಸಂಪೂರ್ಣ ಉಪಯೋಗ ಭಾರತಕ್ಕೇ ಸಿಗುವಂತಾಗಲಿದೆ. ಅಲ್ಲದೆ, ಈ ನೀರು ಕಾಶ‍್ಮೀರದ ಸುಮಾರು 32000 ಹೆಕ್ಟೇರ್ ಪ್ರದೇಶಗಳ ಕೃಷಿ ಚಟುವಟಕೆಗಳಿಗೆ ಬಳಕೆಯಾಗಲಿದೆ. ಅದೂ ಅಲ್ಲದೆ, ಈ ಅಣೆಕಟ್ಟಿನಿಂದ 206 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಉತ್ಪಾದನೆಯ ಗುರಿಯೂ ಹಾಕಿಕೊಳ್ಳಲಾಗಿದೆ. ಕಳೆದ 45 ವರ್ಷಗಳಿಂದ ರಾವಿ ನದಿಯಿಂದ ಪಾಕಿಸ್ತಾನಕ್ಕೆ 1150 ಕ್ಯೂಸೆಕ್ಸ್ ನೀರು ಹರಿದುಹೋಗುತ್ತಿತ್ತು. ಅದೀಗ ಬಂದ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments