Webdunia - Bharat's app for daily news and videos

Install App

India Pakistan: ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ತಾಕತ್ತು ಭಾರತಕ್ಕಿಲ್ಲ, ಅದಕ್ಕೆ ನಾವು ಬಿಡುವುದೂ ಇಲ್ಲ: ಉಗ್ರ ಗುರುಪತ್ವಂತ್ ಸಿಂಗ್ ಪನ್ನು

Krishnaveni K
ಸೋಮವಾರ, 28 ಏಪ್ರಿಲ್ 2025 (14:04 IST)
ನವದೆಹಲಿ: ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ತಾಕತ್ತು ಭಾರತಕ್ಕಿಲ್ಲ. ಯುದ್ಧ ಮಾಡಲು ಭಾರತೀಯ ಸೇನೆಗೆ ನಾವು ಬಿಡುವುದೂ ಇಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಹೇಳಿದ್ದಾನೆ.

ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಕವಿದಿದೆ. ಇದರ ಬೆನ್ನಲ್ಲೇ ಖಲಿಸ್ತಾನಿ ಉಗ್ರ ಭಾರತಕ್ಕೆ ಸವಾಲು ಹಾಕಿದ್ದು ಪಾಕಿಸ್ತಾನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾನೆ.

ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಅಡಲು ನಾವು ಬಿಡಲ್ಲ. ಅಷ್ಟಕ್ಕೂ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವಷ್ಟು ಧೈರ್ಯ ಭಾರತಕ್ಕಿಲ್ಲ. ನಾವು 20 ಮಿಲಿಯನ್ ಸಿಖ್ಖರು ಪಾಕಿಸ್ತಾನದ ಜೊತೆಗಿದ್ದೇವೆ. ಭಾರತದಲ್ಲಿ ಸಿಖ್ಖರು ಮತ್ತು ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ಈಗ ಕಾಲ ಬದಲಾಗಿದೆ. ಇದು 1965 ಅಥವಾ 1971 ಅಲ್ಲ, 2025 ಎಂದು ಪನ್ನು ಎಚ್ಚರಿಕೆ ನೀಡಿದ್ದಾನೆ.

ಪಾಕಿಸ್ತಾನ ಎಂದಿಗೂ ಅವರಾಗಿಯೇ ದಾಳಿ ಮಾಡಲ್ಲ. ಯಾರೇ ಮಾಡಿದರೂ ಅವರಿಗೆ ಕೆಟ್ಟ ಅಂತ್ಯವಿರುತ್ತದೆ. ರಾಜಕೀಯ ಲಾಭಕ್ಕಾಗಿ ಭಾರತವೇ ಪಹಲ್ಗಾಮ್ ನಲ್ಲಿ ಹಿಂದೂಗಳನ್ನು ಕೊಂದಿದೆ ಎಂದು ಪನ್ನು ಆರೋಪಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments