Webdunia - Bharat's app for daily news and videos

Install App

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದ ಭಾರತ

Webdunia
ಮಂಗಳವಾರ, 26 ಸೆಪ್ಟಂಬರ್ 2017 (12:50 IST)
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾರತಕ್ಕೆ ಕಳಂಕ ಹಚ್ಚಲು ಹೊರಟಿದ್ದ ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆಯ ಭಾರತದ ಮಿಷನ್ನಿನ ಕಿರಿಯ ರಾಯಭಾರಿ ಪೌಲೊಮಿ ತ್ರಿಪಾಠಿ ತಕ್ಕ ಉತ್ತರ ಕೊಟ್ಟಿದ್ಧಾರೆ.
 

 ಪ್ಯಾಲೆಸ್ಟೈನ್`ನಲ್ಲಿ ಪೆಲೆಟ್ ಗನ್ ದಾಳಿಯ ಸಂತ್ರಸ್ತೆಯ ಪೋಟೋ ತೋರಿಸಿ ಕಾಶ್ಮೀರದ ಸಂತ್ರಸ್ತೆ ಎಂದು ಹೇಳಿ ಭಾರತಕ್ಕೆ ಕಳಂಕ ಹಚ್ಚಲು ಹೊರಟಿದ್ದ ಪಾಕಿಸ್ತಾನದ ರಾಯಭಾರಿ ಮಲೀಹಾ ಲೋಧಿಗೆ ತ್ರಿಪಾಠಿ ಸೂಕ್ತ ಉತ್ತರ ಕೊಟ್ಟಿದ್ಧಾರೆ.

ಪಾಕಿಸ್ತಾನದ ಶಾಶ್ವತ ಪ್ರತಿನಿಧಿ ತಪ್ಪು ಚಿತ್ರವನ್ನ ತೋರಿಸುವ ಮೂಲಕ ಸಭೆಯನ್ನ ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಸಿದರು. ನಿಜವಾದ ಚಿತ್ರ ಇಲ್ಲಿದೆ ನೋಡಿ. ಇವರು ಜಮ್ಮು ಮತ್ತು ಕಾಶ್ಮೀರದ ಯುವ ಅಧಿಕಾರಿ ಲೆಫ್ಟಿನೆಂಟ್ ಉಮ್ಮರ್ ಫಯಾಜ್, ಪಾಕಿಸ್ತನ ಬೆಂಬಲಿತ ಉಗ್ರರಿಂದ ಕೊಲೆಯಾದವರು. ಉಗ್ರರು ಬರ್ಬರವಾಗಿ ಇವರನ್ನ ಕೊಂದಿದ್ರು ಎಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಫೋಟೋ ಪ್ರದರ್ಶಿಸಿದ್ದಾರೆ.

ಈ ಮೂಲಕ ಮತ್ತೊಮ್ಮೆ ಕಪಟಿ ಪಾಕಿಸ್ತಾನದ ನಿಜ ಬಣ್ಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲಾಗಿದೆ.  ಭಾರತದ ವಿರುದ್ಧ ಕಿರು ಅಣ್ವಸ್ತ್ರ ಪ್ರಯೋಗದ ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿಗೆ ಸುಷ್ಮಾ ಸ್ವರಾಜ್ ತಕ್ಕ ಉತ್ತರ ಕೊಟ್ಟಿದ್ದರು. ನಾವು ಐಐಟಿ, ಐಐಎ< ನಿರ್ಮಿಸಿದ್ದರೆ, ಪಾಕಿಸ್ತಾನ ಉಗ್ರರನ್ನ ಉತ್ಪಾದಿಸುತ್ತಿದೆ ಎಂದು ಕಿಡಿ ಕಾರಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದಿಂದ ವಿಶ್ವಸಂಸ್ಥೆಯ ಶಾಶ್ವತ ಪ್ರತಿನಿಧಿ ಮಲೀಹಾ ಲೋಧಿ, ಗಾಜಾ ಸಂತ್ರಸ್ತೆಯ ಫೋಟೋ ತೋರಿಸಿ ಕಾಶ್ಮಿರದಲ್ಲಿ ಹತ್ಯೆಗೀಡಾದ ಸಂತ್ರಸ್ತೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments