Webdunia - Bharat's app for daily news and videos

Install App

Indian Army: ಭಾರತೀಯ ಸೇನೆಯ ಬತ್ತಳಿಕೆಯಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ವಿಶೇಷತೆ ಏನು ನೋಡಿ

Krishnaveni K
ಮಂಗಳವಾರ, 29 ಏಪ್ರಿಲ್ 2025 (08:56 IST)
ನವದೆಹಲಿ: ಒಂದೆಡೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸದೃಶ ವಾತಾವರಣವಿದ್ದರೆ ಇತ್ತ ನೌಕಾ ಸೇನೆ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ನಡೆಸಿ ಎದುರಾಳಿಗಳಿಗೆ ಎಚ್ಚರಿಕೆ ನೀಡಿದೆ. ಅಷ್ಟಕ್ಕೂ ಬ್ರಹ್ಮೋಸ್ ಕ್ಷಿಪಣಿಯ ವಿಶೇಷತೆಯೇನು ನೋಡಿ.

ಸಬ್ ಮೆರೈನ್, ಶಿಪ್, ಫೈಟರ್ ಏರ್ ಕ್ರಾಫ್ಟ್ ನಿಂದ ಲಾಂಚ್ ಮಾಡಬಹುದಾದ ಭಾರತೀಯ ಸೇನೆಯ ಅತ್ಯಂತ ಪ್ರಬಲ ಕ್ಷಿಪಣಿ ಇದಾಗಿದೆ. ಇದನ್ನು ಭಾರತದ ಡಿಆರ್ ಡಿಒ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಂಶೋಧನೆ ಸಂಸ್ಥೆ ಜಂಟಿಯಾಗಿ ಅಭಿವೃದ್ಧಿ ಪಡಿಸಿದೆ. ಭಾರತದ ಬ್ರಹ್ಮಪುತ್ರ ನದಿ ಮತ್ತು ರಷ್ಯಾದ ಮಾಸ್ಕೊವಾ ಹೆಸರು ಸೇರಿಸಿ ಬ್ರಹ್ಮೋಸ್ ಎಂದು ಇದಕ್ಕೆ ಹೆಸರಿಡಲಾಗಿದೆ.

2019 ರಿಂದ ಈ ಕ್ಷಿಪಣಿ ಭಾರತೀಯ ಸೇನೆಗೆ ಲಭ್ಯವಾಗಿದೆ. ಈ ಕ್ಷಿಪಣಿಯ ಒಟ್ಟು ಭಾರ 3,000 ಕೆ.ಜಿ. 8.4 ಮೀ. ಉದ್ದ ಹೊಂದಿದೆ. ಬ್ರಹ್ಮೋಸ್ ಕ್ಷಿಪಣಿಗಳು ಕನಿಷ್ಠ 200 ಕೆ.ಜಿ. ಸಿಡಿತಲೆಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ. ಚಲಿಸುವ ಗುರಿಯನ್ನೂ ನಿಖರವಾಗಿ ಪತ್ತೆ ಮಾಡಿ ಹೊಡೆದುರುಳಿಸುವ ಸಾಮರ್ಥ್ಯವಿದೆ. ಹಲವು ಕಟ್ಟಡಗಳ ನಡುವೆಯೂ ನಿಖರ ಗುರಿಯನ್ನು ಪತ್ತೆ ಮಾಡಿ ದಾಳಿ ಮಾಡುವ ತಾಕತ್ತು ಹೊಂದಿದೆ. 290 ಕಿ.ಮೀ. ವರೆಗಿನ ಹಾರಾಟದ ವ್ಯಾಪ್ತಿ ಇದಕ್ಕಿದ್ದು ಸೂಪರ್ ಸಾನಿಕ್ ವೇಗ ಹೊಂದಿರುತ್ತದೆ. ಪ್ರಸ್ತುತ ಇರುವ ಸಬ್ ಸಾನಿಕ್ ಕ್ರೂಸ್ ಕ್ಷಿಪಣಿಗಳಿಗೆ ಹೋಲಿಸಿದರೆ ಇದು ಅತ್ಯಂತ ವೇಗದ ಕ್ಷಿಪಣಿಯಾಗಿದೆ. 3 ಪಟ್ಟು ಹೆಚ್ಚು ವೇಗ, ಮೂರು ಪಟ್ಟು ಹೆಚ್ಚಿನ ಹಾರಾಟ ವ್ಯಾಪ್ತಿ, 9 ಪಟ್ಟ ಹೆಚ್ಚು ಚಲನ ಶಕ್ತಿ ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments