Webdunia - Bharat's app for daily news and videos

Install App

ಕೈದಿಯನ್ನ ಜೀವಂತವಾಗಿ ತಿಂದುಮುಗಿಸಿದ ಕೀಟಗಳು!

Webdunia
ಭಾನುವಾರ, 16 ಏಪ್ರಿಲ್ 2023 (11:05 IST)
ವಾಷಿಂಗ್ಟನ್ : ಡೇಂಜರಸ್ ಫಾರೆಸ್ಟ್ನಂತಹ ಸಿನಿಮಾಗಳಲ್ಲಿ ವಿವಿಧ ರೀತಿಯ ಕೀಟಗಳು ಮನುಷ್ಯನನ್ನು ಭೀಕರವಾಗಿ ತಿಂದು ಹತ್ಯೆ ಮಾಡುತ್ತವೆ. ಹಾಗೆಯೇ ಸಿನಿಮೀಯ ಮಾದರಿಯಲ್ಲಿ ಕೀಟಗಳು ಮತ್ತು ತಿಗಣೆ ಕೈದಿಯೊಬ್ಬನನ್ನ ಜೀವಂತವಾಗಿ ತಿಂದುಹಾಕಿರುವ ಭಯಾನಕ ಘಟನೆ ನಡೆದಿದೆ.
 
ಅಮೆರಿಕದ ಅಟ್ಲಾಂಟಾದ ಜೈಲಿನಲ್ಲಿದ್ದ 35 ವರ್ಷದ ಕೈದಿಯೊಬ್ಬನನ್ನು ಕೀಟಗಳು ಮತ್ತು ತಿಗಣೆ ತಿಂದು ಹಾಕಿವೆ ಎಂದು ಸಂತ್ರಸ್ತರ ಕುಟುಂಬದ ವಕೀಲರು ಆರೋಪಿಸಿದ್ದಾರೆ. 

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮೃತ ವ್ಯಕ್ತಿಯ ಕುಟುಂಬವು ಈಗ ಅವರ ಸಾವಿನ ಬಗ್ಗೆ ಕ್ರಿಮಿನಲ್ ತನಿಖೆಗೆ ಒತ್ತಾಯಿಸಿದ್ದು, ಜೈಲನ್ನು ಮುಚ್ಚಬೇಕು ಮತ್ತು ಅಲ್ಲಿನ ಕೈದಿಗಳನ್ನ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದೆ.

ಯುಎಸ್ ಪೊಲೀಸರ ಪ್ರಕಾರ, 2022ರ ಜೂನ್ 12 ರಂದು ಲಾಶಾನ್ ಥಾಂಪ್ಸನ್ ಎಂಬ ವ್ಯಕ್ತಿಯನ್ನ ಅಟ್ಲಾಂಟಾದಲ್ಲಿ ಬಂಧಿಸಿ, ಫುಲ್ಟನ್ ಕೌಂಟಿ ಜೈಲಿಗೆ ಕರೆದೊಯ್ಯಲಾಗಿತ್ತು. ಆದರೆ ವಿಚಾರಣೆಯ ನಂತರ ಆತನನ್ನ ಮಾನಸಿಕ ಅಸ್ವಸ್ಥ ಎಂದು ಪರಿಗಣಿಸಿ ಮನೋವೈದ್ಯಕೀಯ ವಿಭಾಗದಲ್ಲಿರಿಸಲಾಗಿತ್ತು. ಈ ನಡುವೆ ಪೊಲೀಸರು ಸಿಆರ್ಪಿಸಿ ಅನ್ವಯ ತನಿಖೆ ಪ್ರಕ್ರಿಯೆ ಆರಂಭಿಸಿದ್ದರು. ಆತನ ಹೇಳಿಕೆ ಪಡೆಯಲು 2022ರ ಸೆಪ್ಟೆಂಬರ್ 13ರಂದು ಹೋದಾಗ ಥಾಂಪ್ಸನ್ ಪ್ರತಿಕ್ರಿಯಿಸಲಿಲ್ಲ. ಅದಾದ 3 ತಿಂಗಳ ನಂತರ ಆತ ಕೊಠಡಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿತು.

ಈ ಕುರಿತು ಪ್ರತಿಕ್ರಿಯಿಸಿರುವ ಸಂತ್ರಸ್ತ ಕುಟುಂಬ ಪರ ವಕೀಲರು, ಥಾಂಪ್ಸನ್ ಅವರನ್ನ ಕೊಳಕು ತುಂಬಿದ ಕೋಣೆಯಲ್ಲಿ ಇರಿಸಲಾಗಿತ್ತು. ಹಾಗಾಗಿ ತಾನು ಮಲಗುತ್ತಿದ್ದ ಹಾಸಿಗೆಯಲ್ಲಿ ಕೀಟಗಳು ಹೆಚ್ಚಾಗಿ, ಮೂರು ತಿಂಗಳ ನಂತರ ಕೀಟಗಳಿಂದ ಜೀವಂತವಾಗಿ ತಿನ್ನಲ್ಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆಗಾರರು ಎಂದು ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments