Webdunia - Bharat's app for daily news and videos

Install App

ಐಸಿಸ್ ಮುಖ್ಯಸ್ಥ ಬಾಗ್ದಾದಿ ಸ್ಥಿತಿ ಗಂಭೀರ

Webdunia
ಬುಧವಾರ, 5 ಅಕ್ಟೋಬರ್ 2016 (10:47 IST)
ವಿಷ ಪ್ರಾಶನಕ್ಕೊಳಗಾಗಿರುವ ಐಸಿಸ್ ಉಗ್ರ ಸಮೂಹದ ಮುಖ್ಯಸ್ಥ ಅಬು-ಬಕ್ರ ಅಲ್-ಬಾಗ್ದಾದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 

 
ಬಾಗ್ದಾದಿ ಮತ್ತು ಆತನ ಮೂವರು ಸಹಚರರಿಗೆ ವಿಷ ಪ್ರಾಶನ ಮಾಡಿಸಿ ಹತ್ಯೆಗೈಯ್ಯಲು ಯತ್ನಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿರುವ ಮೂವರನ್ನು ಅಜ್ಞಾತ ಸ್ಥಳಕ್ಕೆ ಕೊಂಡೊಯ್ದು ಚಿಕಿತ್ಸೆ ನೀಡಿಸಲಾಗುತ್ತಿದೆ ಎಂದು ಅರೇಬಿಕ್ ಮತ್ತು ಇರಾನಿಯನ್ ಭಾಷೆಯ ಅನೇಕ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿದೆ.
 
ಈ ವಂಚನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಐಸಿಸ್ ಉಗ್ರರು ಹಲವರನ್ನು ಬಂಧಿಸಿ ವಿಚಾರಣೆಗೊಳಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 
 
ವಿಶ್ವದ ಮೋಸ್ಟ್ ವಾಟೆಂಡ್ ಟೆರರಿಸ್ಟ್ ಗಳ ಪಟ್ಟಿಯಲ್ಲಿರುವ ಅಬು ಬಕ್ರ್ ಅಲ್ ಬಗ್ದಾದಿ ತಲೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಲಾಗಿದ್ದು, ಅಮೆರಿಕಾ ಹಾಗೂ ಅದರ ಮಿತ್ರ ಪಡೆಗಳು ಈತನನ್ನು ಜೀವಂತವಾಗಿ ಸೆರೆ ಹಿಡಿಯಲು ತೀವ್ರ ಕಾರ್ಯಾಚರಣೆ ನಡೆಸಿದ್ದವು.
 
ಅನೇಕ ಬಾರಿ ಗಂಭೀರವಾಗಿ ಗಾಯಗೊಂಡಿದ್ದ ಬಗ್ದಾದಿ ವಿಶ್ವದ ಮೋಸ್ಟ್ ವಾಟೆಂಡ್ ಉಗ್ರನಾಗಿದ್ದು ಆತನ ತಲೆಗೆ 10 ಮಿಲಿಯನ್ ಟಾಲರ್ ಬಹುಮಾನವನ್ನು ಘೋಷಿಸಲಾಗಿದೆ.  
 
ಇರಾಕ್‌ನ ಬಿಹಾಜ್ ಜಿಲ್ಲೆಯಲ್ಲಿ ಐಸಿಸ್ ಉನ್ನತ ನಾಯಕರ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ವಿಷ ಪ್ರಾಶನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಒಬ್ಬ ತನ್ನನ್ನು ತಾನು ಸ್ಪೋಟಿಸಿಕೊಂಡ ಪರಿಣಾಮ 16 ಉಗ್ರರು ಸ್ಥಳದಲ್ಲೇ ದುರ್ಮರವನ್ನಪ್ಪಿದ್ದಾರೆ ಎಂದು ಇರಾಕ್ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments