Webdunia - Bharat's app for daily news and videos

Install App

ಲಂಡನ್ನಿನ ಬಕೆಟ್ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್

Webdunia
ಶನಿವಾರ, 16 ಸೆಪ್ಟಂಬರ್ 2017 (12:46 IST)
ಲಂಡನ್ನಿನ ಅಂಡರ್ ಗ್ರೌಂಡ್ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ಹೊಣೆಯನ್ನ ಇರಾಕ್`ನ ಐಸಿಸ್ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿದೆ. ಅಮಾಕ್ ಪ್ರಾಪಗ್ಯಾಂಡ ಏಜೆನ್ಸಿಯಲ್ಲಿ ಐಸಿಸ್ ಪ್ರಕಟಣೆ ಪ್ರಕಟವಾಗಿದೆ.

ಸುಧಾರಿತ ಸ್ಪೊಟಕ ಬಳಸಿ ಲಂಡನ್ನಿನ ಮೆಟ್ರೋ ಸ್ಟೇಶನ್ನಿನಲ್ಲಿ ಶುಕ್ರವಾರ ನಡೆಸಿರುವ ಸ್ಫೋಟದಲ್ಲಿ 29 ಮಂದಿ ಗಾಯಗೊಂಡಿದ್ದರು. ಮುಖ ಮತ್ತು ಕೈಕಾಲುಗಳ ಸುಟ್ಟ ಗಾಯಗಳಿಂದ ಸಂತ್ರಸ್ತರು ಹಿಂಸೆ ಅನುಭವಿಸಿದ್ದರು. ಈ ವರ್ಷ ಬ್ರಿಟನ್ನಿನಲ್ಲಿ ನಡೆದ 5ನೇ ಮತ್ತು ಲಂಡನ್ನಿನ 4ನೇ ಬಾಂಬ್ ದಾಳಿ ಇದಾಗಿದ್ದು, ಗಮಾನಾರ್ಹ ಹಾನಿ ಉಂಟು ಮಾಡುವುದೇ ಇದರ ಉದ್ದೇಶವಾಗಿದೆ ಎಂದು ಪ್ರಧಾನ ಮಂತ್ರಿ ತೆರೆಸಾ ಮೇ ಹೇಳಿದ್ದಾರೆ.

 ಪಾರ್ಸನ್ ಗ್ರೀನ್ ಸುರಂಗ ನಿಲ್ದಾಣದಲ್ಲಿ ಈ ಸ್ಫೋಟ ಸಂಭವಿಸಿದ್ದು,  ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಸಮೀಪದಲ್ಲಿ ದೊಡ್ಡ ಸ್ಫೋಟದ ಸದ್ದು ಕೇಳಿಸಿತು. ಬೆಂಕಿ ಉಂಡೆಗಳು ಹಾರಲಾಂಭಿಸಿದವು. ಬಕೆಟ್ ಬಾಂಬ್ ಸ್ಫೋಟಗೊಂಡು ಹಲವರಿಗೆ ಸುಟ್ಟ ಗಾಯಗಳಾದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಯೂರೋಪ್ ರಾಷ್ಟ್ರಗಳ ಮೇಲೆ ಕೆಂಡ ಕಾರುವ ಐಸಿಸ್ ಉಗ್ರರು ನಮ್ಮ ವಿಧ್ವಂಸಕ ಕೃತ್ಯಗಳನ್ನ ಮುಂದುವರೆಸುವುದಾಗಿ ಹೇಳಿಕೊಂಡಿದ್ದಾರೆ. ಲಂಡನ್ನಿನಲ್ಲಿ ಎಷ್ಟೇ ಭದ್ರತೆ ಕೈಗೊಂಡರೂ ದಾಳಿ ನಿಲ್ಲುವುದಿಲ್ಲ ಎಂದು ಹೇಳಿಕೊಂಡಿದ್ಧಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments