Webdunia - Bharat's app for daily news and videos

Install App

ಇಸ್ರೇಲ್ ಸೇನಾ ಕಾರ್ಯಾಚರಣೆ: ಲೆಬನಾನ್ ತೊರೆಯಲು ತನ್ನ ಪ್ರಜೆಗಳಿಗೆ ಕರೆ ನೀಡಿದ ಆಸ್ಟ್ರೇಲಿಯಾ

Sampriya
ಗುರುವಾರ, 26 ಸೆಪ್ಟಂಬರ್ 2024 (14:26 IST)
Photo Courtesy X
ಸಿಡ್ನಿ: ಮೂರು ದಿನಗಳ ಹಿಂದೆ ಲೆಬನಾನ್‌ ಮೇಲೆ ಇಸ್ರೇಲ್‌ ನಡೆಸಿದ ಸೇನಾ ಕಾರ್ಯಾಚರಣೆಯಿಂದ ಸುಮಾರು 600 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅದರ ಬೆನ್ನಲ್ಲೇ ಬೈರೂತ್‌ ವಿಮಾನ ನಿಲ್ದಾಣ ಸ್ಥಗಿತಗೊಳ್ಳುವ ಸಾಧ್ಯತೆ ಇರುವುದರಿಂದ, ತಕ್ಷಣವೇ ಲೆಬನಾನ್‌ ತೊರೆಯುವಂತೆ ತನ್ನ ಪ್ರಜೆಗಳಿಗೆ ಆಸ್ಟ್ರೇಲಿಯಾ ಸೂಚನೆ ನೀಡಿದೆ.

ಗಾಜಾದಲ್ಲಿ ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ ಆರಂಭವಾದಾಗಿಂದ ಲೆಬನಾನಿನ ಹಿಜ್ಬುಲ್ಲಾ ಸಂಘಟನೆ ಮತ್ತು ಇಸ್ರೇಲ್‌ ಪಡೆ ನಡುವೆ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಡಿಯಾಚೆಗಿನ ಸಂಘರ್ಷ ತೀವ್ರಗೊಂಡಿದೆ.

ಆಸ್ಟ್ರೇಲಿಯಾದ ವಿದೇಶಾಂಗ ಇಲಾಖೆಯ ಮಾಹಿತಿ ಪ್ರಕಾರ, ಅಂದಾಜು 15,000 ಆಸ್ಟ್ರೇಲಿಯನ್ನರು ಲೆಬನಾನ್‌ನಲ್ಲಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಲ್ಗೊಂಡಿರುವ ಆಸ್ಟ್ರೇಲಿಯಾ ವಿದೇಶಾಂಗ ಸಚಿವೆ ಪೆನ್ನಿ ವಾಂಗ್‌ ಅವರು, ಇಸ್ರೇಲ್‌, ಲೆಬನಾನ್‌ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೈರೂತ್‌ ವಿಮಾನ ನಿಲ್ದಾಣ ದೀರ್ಘಾವಧಿವರೆಗೆ ಮುಚ್ಚುವ ಸಾಧ್ಯತೆ ಇದೆ. ಆಸ್ಟ್ರೇಲಿಯನ್ನರು ಕೂಡಲೇ ಹೊರಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು, ಪ್ರಜೆಗಳನ್ನು ಜಲಮಾರ್ಗವಾಗಿಯಾದರೂ ವಾಪಸ್‌ ಕರೆತರುವ ನಿಟ್ಟಿನಲ್ಲೂ ಸರ್ಕಾರ ಯೋಜಿಸಿದೆ ಎಂದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments