Webdunia - Bharat's app for daily news and videos

Install App

ಹೀಗೂ ಉಂಟೇ : 35 ವರ್ಷಗಳಿಂದ ಗರ್ಭ ಧರಿಸಿದ್ದ ಮುದುಕಿ..!

Webdunia
ಮಂಗಳವಾರ, 28 ಡಿಸೆಂಬರ್ 2021 (05:47 IST)
ಅಲ್ಜೀರಿಯಾದ ಮಹಿಳೆಯೊಬ್ಬರಿಗೆ ತನ್ನ ಅರ್ಧ ವಯಸ್ಸಿನವರೆಗೆ ತನ್ನ ಹೊಟ್ಟೆಯಲ್ಲಿ ಮಗುವಿದೆ ಎಂಬುದೇ ತಿಳಿದಿರಲಿಲ್ಲ.

ಇದಕ್ಕೆ ಮುಖ್ಯ ಕಾರಣ ಅಸಾಮಾನ್ಯ ಗರ್ಭಧಾರಣೆ. 35 ವರ್ಷಗಳ ನಂತರ, ಹೊಟ್ಟೆಯಲ್ಲಿ ಭಯಂಕರ ನೋವು ಕಾಣಿಸಿಕೊಂಡಾಗಲಷ್ಟೇ ತಾನು ಗರ್ಭಿಣಿಯಾಗಿದ್ದೆ ಎಂಬುದು ಗೊತ್ತಾಗಿದೆ.

ಅಲ್ಜೀರಿಯಾದ 73 ವರ್ಷದ ಮಹಿಳೆಯೊಬ್ಬರಿಗೆ ಇದ್ದಕ್ಕಿದ್ದಂತೆ ಹೊಟ್ಟೆಯಲ್ಲಿ ತೀವ್ರವಾದ ನೋವು ಕಾಣಿಸಿತು. ಸಹಿಸಲಾಗದ ನೋವಿನಿಂದ ಕಿರುಚುತ್ತಿದ್ದ ಮುದುಕಿಯನ್ನು ಕುಟುಂಬಸ್ಥರು ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದರು.

ಹೊಟ್ಟೆ ನೋವಿಗೆ ಕಾರಣವೇನು ಎಂದು ವೈದ್ಯರು ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದಾಗ ದಿಗ್ಭ್ರಮೆಗೊಂಡರು. ಏಕೆಂದರೆ ಹಲವಾರು ದಶಕಗಳಿಂದ ವಯಸ್ಸಾದ ಮಹಿಳೆಯ ಹೊಟ್ಟೆಯಲ್ಲಿ 7 ತಿಂಗಳ ಭ್ರೂಣವಿತ್ತು. ವಿಚಿತ್ರವೆಂದರೆ ಆ ಮಹಿಳೆಗೆ ಈ ಬಗ್ಗೆ ಗೊತ್ತೇ ಇರಲಿಲ್ಲ.

ಸನ್ ವರದಿಯ ಪ್ರಕಾರ, ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಮಹಿಳೆಯನ್ನು ತಪಾಸಣೆ ನಡೆಸಿದಾಗ ಹೊಟ್ಟೆಯಲ್ಲಿ ಸುಮಾರು 35 ವರ್ಷದಿಂದ ಏಳು ತಿಂಗಳ ಭ್ರೂಣ ಇರುವುದು ಪತ್ತೆಯಾಗಿದೆ.

ಅಷ್ಟೇ ಅಲ್ಲದೆ ಈ ಭ್ರೂಣವು ಕಲ್ಲಿನಂತೆ ಮಾರ್ಪಟ್ಟಿದೆ. ಇಂತಹ ಅಪರೂಪದ ಪ್ರಕರಣಗಳನ್ನು ಸಾಮಾನ್ಯ ಭಾಷೆಯಲ್ಲಿ ಬೇಬಿ ಸ್ಟೋನ್ ಎನ್ನಲಾಗುತ್ತದೆ. ಇದೀಗ 2 ಕೆ.ಜಿ ಆಗಿದ್ದ ಈ ಭ್ರೂಣವನ್ನು ವೈದ್ಯರು ಹೊರ ತೆಗೆದಿದ್ದಾರೆ.

ಇಂತಹ ಪ್ರಕರಣ ಬಹಳ ಅಪರೂಪವಾಗಿ ಕಂಡು ಬರುತ್ತವೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಲಿಥೋಪಿಡಿಯನ್ ಎಂಬ ಸ್ಥಿತಿ ಎಂದು ಕರೆಯಲಾಗುತ್ತದೆ. ಭ್ರೂಣವು ಹೊಟ್ಟೆಯಲ್ಲೇ ಉಳಿಯುವುದರಿಂದಕಲ್ಲಾಗಲು ಪ್ರಾರಂಭಿಸುತ್ತದೆ. ಮಹಿಳೆಯ ದೇಹದಲ್ಲಿ ಪತ್ತೆಯಾದ ಬೇಬಿ ಸ್ಟೋನ್ ಕೂಡ ಇದೇ ಕಾರಣದಿಂದ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments