Webdunia - Bharat's app for daily news and videos

Install App

ಹೀಗೂ ಉಂಟೇ : 35 ವರ್ಷಗಳಿಂದ ಗರ್ಭ ಧರಿಸಿದ್ದ ಮುದುಕಿ..!

Webdunia
ಮಂಗಳವಾರ, 28 ಡಿಸೆಂಬರ್ 2021 (05:47 IST)
ಅಲ್ಜೀರಿಯಾದ ಮಹಿಳೆಯೊಬ್ಬರಿಗೆ ತನ್ನ ಅರ್ಧ ವಯಸ್ಸಿನವರೆಗೆ ತನ್ನ ಹೊಟ್ಟೆಯಲ್ಲಿ ಮಗುವಿದೆ ಎಂಬುದೇ ತಿಳಿದಿರಲಿಲ್ಲ.

ಇದಕ್ಕೆ ಮುಖ್ಯ ಕಾರಣ ಅಸಾಮಾನ್ಯ ಗರ್ಭಧಾರಣೆ. 35 ವರ್ಷಗಳ ನಂತರ, ಹೊಟ್ಟೆಯಲ್ಲಿ ಭಯಂಕರ ನೋವು ಕಾಣಿಸಿಕೊಂಡಾಗಲಷ್ಟೇ ತಾನು ಗರ್ಭಿಣಿಯಾಗಿದ್ದೆ ಎಂಬುದು ಗೊತ್ತಾಗಿದೆ.

ಅಲ್ಜೀರಿಯಾದ 73 ವರ್ಷದ ಮಹಿಳೆಯೊಬ್ಬರಿಗೆ ಇದ್ದಕ್ಕಿದ್ದಂತೆ ಹೊಟ್ಟೆಯಲ್ಲಿ ತೀವ್ರವಾದ ನೋವು ಕಾಣಿಸಿತು. ಸಹಿಸಲಾಗದ ನೋವಿನಿಂದ ಕಿರುಚುತ್ತಿದ್ದ ಮುದುಕಿಯನ್ನು ಕುಟುಂಬಸ್ಥರು ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದರು.

ಹೊಟ್ಟೆ ನೋವಿಗೆ ಕಾರಣವೇನು ಎಂದು ವೈದ್ಯರು ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದಾಗ ದಿಗ್ಭ್ರಮೆಗೊಂಡರು. ಏಕೆಂದರೆ ಹಲವಾರು ದಶಕಗಳಿಂದ ವಯಸ್ಸಾದ ಮಹಿಳೆಯ ಹೊಟ್ಟೆಯಲ್ಲಿ 7 ತಿಂಗಳ ಭ್ರೂಣವಿತ್ತು. ವಿಚಿತ್ರವೆಂದರೆ ಆ ಮಹಿಳೆಗೆ ಈ ಬಗ್ಗೆ ಗೊತ್ತೇ ಇರಲಿಲ್ಲ.

ಸನ್ ವರದಿಯ ಪ್ರಕಾರ, ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಮಹಿಳೆಯನ್ನು ತಪಾಸಣೆ ನಡೆಸಿದಾಗ ಹೊಟ್ಟೆಯಲ್ಲಿ ಸುಮಾರು 35 ವರ್ಷದಿಂದ ಏಳು ತಿಂಗಳ ಭ್ರೂಣ ಇರುವುದು ಪತ್ತೆಯಾಗಿದೆ.

ಅಷ್ಟೇ ಅಲ್ಲದೆ ಈ ಭ್ರೂಣವು ಕಲ್ಲಿನಂತೆ ಮಾರ್ಪಟ್ಟಿದೆ. ಇಂತಹ ಅಪರೂಪದ ಪ್ರಕರಣಗಳನ್ನು ಸಾಮಾನ್ಯ ಭಾಷೆಯಲ್ಲಿ ಬೇಬಿ ಸ್ಟೋನ್ ಎನ್ನಲಾಗುತ್ತದೆ. ಇದೀಗ 2 ಕೆ.ಜಿ ಆಗಿದ್ದ ಈ ಭ್ರೂಣವನ್ನು ವೈದ್ಯರು ಹೊರ ತೆಗೆದಿದ್ದಾರೆ.

ಇಂತಹ ಪ್ರಕರಣ ಬಹಳ ಅಪರೂಪವಾಗಿ ಕಂಡು ಬರುತ್ತವೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಲಿಥೋಪಿಡಿಯನ್ ಎಂಬ ಸ್ಥಿತಿ ಎಂದು ಕರೆಯಲಾಗುತ್ತದೆ. ಭ್ರೂಣವು ಹೊಟ್ಟೆಯಲ್ಲೇ ಉಳಿಯುವುದರಿಂದಕಲ್ಲಾಗಲು ಪ್ರಾರಂಭಿಸುತ್ತದೆ. ಮಹಿಳೆಯ ದೇಹದಲ್ಲಿ ಪತ್ತೆಯಾದ ಬೇಬಿ ಸ್ಟೋನ್ ಕೂಡ ಇದೇ ಕಾರಣದಿಂದ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments