Webdunia - Bharat's app for daily news and videos

Install App

ತರಗತಿಯಲ್ಲೇ ಪ್ರಿಯತಮೆಗೆ ಬೆಂಕಿ ಹಚ್ಚಿ ಕೊಂದ, ತಾನು ಸತ್ತ

Webdunia
ಗುರುವಾರ, 2 ಫೆಬ್ರವರಿ 2017 (11:57 IST)
ಯುವಕನೋರ್ವ ತನ್ನ ಮಾಜಿ ಪ್ರಿಯತಮೆಯನ್ನು ಸಜೀವ ವಾಗಿ ಸುಟ್ಟು ತಾನು ಕೂಡ ಬೆಂಕಿ ಹಚ್ಚಿಕೊಂಡ ಕರಾಳ ಘಟನೆ ಕೇರಳದ ಕೊಟ್ಟಾಯಂನಲ್ಲಿ ಬುಧವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಹ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 
ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಯುವತಿಯ ತರಗತಿಗೆ ಬಂದ ಯುವಕ ಆಕೆಯ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ತಕ್ಷಣ ಆಕೆ ಅಲ್ಲಿಂದ ಓಡಿದ್ದಾಳೆ. ಆದರೆ ಬೆನ್ನಟ್ಟಿ ಆಕೆಯನ್ನು ಹಿಡಿಯಲು ಸಫಲನಾದ ಯುವಕ ಲೈಟರ್‌ನಿಂದ ಬೆಂಕಿ ಹಚ್ಚಿ ತಾನು ಕೂಡ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಇದೆಲ್ಲವೂ ಯುವತಿಯ ಸಹಪಾಠಿಗಳ ಮುಂದೆ ನಡೆದಿದೆ. 
 
ಮೃತರನ್ನು ಲಕ್ಷ್ಮೀ (20) ಹಾಗೂ ಆದರ್ಶ್ (25) ಎಂದು ಗುರುತಿಸಲಾಗಿದೆ.
 
ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಅವರಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 
 
ಲಕ್ಷ್ಮಿ ಕೊಟ್ಟಾಯಂ ಮೆಡಿಕಲ್ ಕಾಲೇಜ್‌ನಲ್ಲಿ ಫಿಜಿಯೋಥೆರಪಿ ನಾಲ್ಕನೆ ಸೆಮಿಸ್ಟರ್ ವಿದ್ಯಾರ್ಥಿನಿಯಾಗಿದ್ದು, ಆದರ್ಶ ಇದೇ ಕಾಲೇಜಿನ ಮಾಜಿ ವಿದ್ಯಾರ್ಥಿಯಾಗಿದ್ದಾನೆ. ಮೂಲಗಳ ಪ್ರಕಾರ ಮೃತರಿಬ್ಬರು ಈ ಹಿಂದೆ ಪರಷ್ಪರ ಪ್ರೀತಿಸುತ್ತಿದ್ದರು.ಆದರೆ ಪೋಷಕರು ಅವರ ಪ್ರೀತಿಗೆ ವಿರೋಧ ವ್ಯಕ್ತ ಪಡಿಸದ್ದರಿಂದ ಇತ್ತೀಚಿಗೆ ಲಕ್ಷ್ಮಿ ಆತನಿಂದ ದೂರವಿರಲು ಪ್ರಯತ್ನಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಯುವಕ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆಕೆಗೆ ಪದೇ ಪದೇ ಎಚ್ಚರಿಕೆ ನೀಡುತ್ತಲೇ ಬಂದಿದ್ದ. ಮತ್ತೀಗ ಈ ಘೋರ ಕೃತ್ಯವನ್ನೆಸಗಿದ್ದಾನೆ.
 
ಎಲ್ಲವೂ ಅರೆಕ್ಷಣದಲ್ಲಿ ನಡೆದು ಹೋಯಿತು, ಆಕೆಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಸಹಪಾಠಿಗಳು ಅಸಹಾಯಕತೆಯನ್ನು ವ್ಯಕ್ತ ಪಡಿಸಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments