Webdunia - Bharat's app for daily news and videos

Install App

ಕಾಶ್ಮಿರ ಭಾರತ ದೇಶದ ಅವಿಭಾಜ್ಯ ಅಂಗವಲ್ಲ: ಪಾಕಿಸ್ತಾನ್ ಸಂಸತ್

Webdunia
ಶುಕ್ರವಾರ, 7 ಅಕ್ಟೋಬರ್ 2016 (19:12 IST)
ಕಾಶ್ಮಿರ ಭಾರತದ ಅವಿಭಾಜ್ಯ ಅಂಗವಲ್ಲ. ಕಾಶ್ಮಿರ ಸಮಸ್ಯೆ ಪರಿಹಾರಕ್ಕಾಗಿ ಭಾರತ ಸರಕಾರದೊಂದಿಗೆ ಫಲಿತಾಂಶ ಬರುವಂತಹ ಮಾತುಕತೆಯಲ್ಲಿ ತೊಡಗಬೇಕು ಎಂದು ಪಾಕಿಸ್ತಾನ ಸಂಸತ್ ಅವಿರೋಧ ನಿರ್ಣಯ ಅಂಗೀಕರಿಸಿದೆ.
 
ಪಾಕಿಸ್ತಾನ ಸಂಸತ್ತಿನ ಜಂಟಿ ಅಧಿವೇಶನದಲ್ಲಿ, ಭಾರತದೊಂದಿಗಿನ ಉದ್ರಿಕ್ತತೆಯ ಬಗ್ಗೆ ನಡೆದ ಚರ್ಚೆಯ ಸಂದರ್ಭದಲ್ಲಿ ಕಾಶ್ಮಿರ ಬಾರತದ ಅವಿಭಾಜ್ಯ ಅಂಗವಲ್ಲ ಎನ್ನುವ ನಿರ್ಣಯ ಕೈಗೊಂಡಿತು. ಕಾಶ್ಮಿರದಲ್ಲಿ ನಡೆಯುತ್ತಿರುವ ಮಾನಹ ಹಕ್ಕು ಉಲ್ಲಂಘನೆ ಕುರಿತಂತೆ ಅಂತಾರಾಷ್ಟ್ರೀಯ ಸಮುದಾಯ ಸ್ವತಂತ್ರ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿತು.  
 
ಪ್ರಧಾನಮಂತ್ರಿ ನವಾಜ್ ಷರೀಫ್ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿ, ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಕ್ರೂರ ಕೃತ್ಯಗಳನ್ನು ನಿಲ್ಲಿಸಲು ವಿಶ್ವ ಸಮುದಾಯ ತನ್ನ ಪಾತ್ರವನ್ನು ನಿಭಾಯಿಸಬೇಕು ಎಂದು ಒತ್ತಾಯಿಸಿದರು.
 
ಭಾರತದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ, ಹುರಿಯತ್ ನಾಗರಿಕರನ್ನು ಬಂಧಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಮೋದಿ ಸರಕಾರ ಕೂಡಲೇ ಹುರಿಯತ್ ನಾಯಕರನ್ನು ಬಿಡುಗಡೆಗೊಳಿಸಬೇಕು ಎಂದು ಪಾಕ್ ಒತ್ತಾಯಿಸಿದೆ.
 
ಕಾಶ್ಮಿರ ಭಾರತದ ಅವಿಭಾಜ್ಯ ಅಂಗವಾಗಿದೆ ಎನ್ನುವ ಭಾರತದ ಹೇಳಿಕೆಯನ್ನು ತಿರಸ್ಕರಿಸಿದ ಪಾಕ್. ಕಾಶ್ಮಿರ ವಿವಾದಿತ ಪ್ರದೇಶ ಎಂದು ವಿಶ್ವಸಂಸ್ಥೆ ಘೋಷಿಸಿದೆ. ಭಾರತ ಸರಕಾರ ಅಂತಾರಾಷ್ಟ್ರೀಯ ಮತ್ತು ಮಾನವೀಯತೆಯ ಕಾಯ್ಜೆಗಳಿಗೆ ಬದ್ಧತೆ ತೋರಬೇಕಾಗಿದೆ ಎಂದು ಪಾಕ್ ಮುಖಂಡ ಸರ್ತಾಜ್ ಅಜೀಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments