Webdunia - Bharat's app for daily news and videos

Install App

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

Krishnaveni K
ಮಂಗಳವಾರ, 22 ಜುಲೈ 2025 (18:26 IST)
ಯೆಮನ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷ ಪ್ರಿಯ ಕೊನೆಗೂ ಪಾರಾಗಿದ್ದಾರೆ. ಅವರ ಮರಣ ದಂಡನೆ ರದ್ದಾಗಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಧರ್ಮಗುರು ಡಾ ಕೆಎ ಪೌಲ್ ಹೇಳಿದ್ದಾರೆ.

ಕೇರಳದ ಪಾಲಕ್ಕಾಡ್ ಮೂಲದ ನಿಮಿಷ ಪ್ರಿಯ 2017 ರಿಂದ ಯೆಮನ್ ನಲ್ಲಿ ಜೈಲು ವಾಸಿಯಾಗಿದ್ದರು. ಅಲ್ಲಿನ ಸ್ಥಳೀಯ ನಿವಾಸಿ ಮೆಹ್ದಿಗೆ ಓವರ್ ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಿದ ಪ್ರಕರಣದಲ್ಲಿ ಆಕೆಯ ಬಂಧನವಾಗಿತ್ತು. ಮೊನ್ನೆಯಷ್ಟೇ ಆಕೆಗೆ ಗಲ್ಲು ಶಿಕ್ಷೆ ನಿಗದಿಯಾಗಿತ್ತು.

ಆದರೆ ಕೊನೆಯ ಕ್ಷಣದಲ್ಲಿ ಸೂಫಿ ಸಂತರ ಮಧ್ಯಸ್ಥಿಕೆಯಲ್ಲಿ ಯೆಮನ್ ಸರ್ಕಾರದ ಜೊತೆ ಮಾತುಕತೆ ನಡೆಸಿ ಮರಣದಂಡನೆ ಮುಂದೂಡಲಾಗಿತ್ತು. ಇದೀಗ ಸತತ ಪ್ರಯತ್ನಗಳ ನಂತರ ಆಕೆಗೆ ಕ್ಷಮೆ ನೀಡಲು ನಿರ್ಧರಿಸಲಾಗಿದೆ ಎಂದು ಪೌಲ್ ಹೇಳಿದ್ದಾರೆ.

ಸದ್ಯಕ್ಕೆ ನಿಮಿಷ ಪ್ರಿಯ ಯೆಮನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಕಳೆದ 10 ದಿನಗಳಿಂದ ಹಗಲಿರುಳು ನಡೆಸಿದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ನಿಮಿಷ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದಾಗಿದೆ. ಇದನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ನಾಯಕರಿಗೆ ಧನ್ಯವಾದ. ದೇವರ ದಯೆಯಿಂದ ಆಕೆಯನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮ್ಮ ರಾಜತಾಂತ್ರಿಕರನ್ನು ಕಳುಹಿಸಿದ್ದಕ್ಕೆ ಮತ್ತು ನಿಮಿಷ ಪ್ರಿಯಾರನ್ನು ವೃತ್ತಿಪರವಾಗಿ ಸುರಕ್ಷಿತವಾಗಿ ಕರೆದೊಯ್ಯಲು ತಯಾರಿ ನಡೆಸಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದಗಳು ಎಂದು ಕೆಎ ಪೌಲ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments