Webdunia - Bharat's app for daily news and videos

Install App

ಭಯೋತ್ಪಾದನೆಯ ಬಗ್ಗೆ ಪಾಕ್ ನಾಯಕರು ಯಾಕೆ ಮೌನವಾಗಿದ್ದಾರೆ: ಮಲಾಲಾ ಪ್ರಶ್ನೆ

Webdunia
ಭಾನುವಾರ, 4 ಅಕ್ಟೋಬರ್ 2015 (12:21 IST)
ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನದ ನಾಯಕರು ಯಾಕೆ ಮೌನವಾಗಿದ್ದಾರೆ ಎಂದು ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ಝಾಯಿ ಪ್ರಶ್ನಿಸಿದ್ದಾರೆ. ಮುಂದೆ ನನಗೆ ದೇಶದ ಪ್ರಧಾನಿಯಾಗುವ ಬಯಕೆಯೂ ಇದೆ ಎಂದು ಹೇಳಿದ್ದಾರೆ. 
 
ಕಳೆದ ವರ್ಷ ಭಾರತದ ಮಕ್ಕಳ ಹಕ್ಕು ಕಾರ್ಯಕರ್ತ ಕೈಲಾಶ್ ಸತ್ಯಾರ್ಥಿಯೊಂದಿಗೆ ನೊಬೆಲ್ ಪ್ರಶಸ್ತಿ ಹಂಚಿಕೊಂಡ ಮಲಾಲಾ, ಮುಂಬರುವ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
 
ಶಿಕ್ಷಣಕ್ಕಾಗಿ ಸ್ವಾತ್ ಕಣಿವೆಯಲ್ಲಿ ಹೋರಾಟ ನಡೆಸುತ್ತಿರುವಾಗ ಉಗ್ರರು ಆಕೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಮಾಜಿ ಪ್ರಧಾನಿ ಬೇನಜೀರ್ ಭುಟ್ಟೋ ನನಗೆ ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
 
ಮಹಿಳೆಯ ಉತ್ತಮ ನಾಯಕಿಯಾಗಲು ಸಾಧ್ಯವಿಲ್ಲ ಎಂದು ಹಲವಾರು ಜನರು ಅಭಿಪ್ರಾಯಪಡುತ್ತಾರೆ. ಆದರೆ, ಭುಟ್ಟೋ ಮಹಿಳೆ ಉತ್ತಮ ನಾಯಕಿಯಾಗಬಲ್ಲಳು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
 
ಭುಟ್ಟೋರಂತೆ ನೀವು ಕೂಡಾ ಪಾಕಿಸ್ತಾನದ ಪ್ರಧಾನಿಯಾಗಲು ಬಯಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಲಾಲಾ, ಒಂದು ವೇಳೆ ಜನತೆ ನನಗೆ ಮತ ಹಾಕಲು ಬಯಸಿದಲ್ಲಿ ಪ್ರಧಾನಿಯಾಗುವೆ. ಆದರೆ, ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎನ್ನುವುದೇ ನನ್ನ ಕನಸು ಎಂದು ತಿಳಿಸಿದ್ದಾರೆ.
 
ಏತನ್ಮಧ್ಯೆ, ಸಮಾಜದಲ್ಲಿ ಬದಲಾವಣೆ ತರಲು ಪ್ರಧಾನಿಯಾಗುವುದು ಒಂದೇ ಮಾರ್ಗವಲ್ಲ. ಹಲವು ಮಾರ್ಗಗಳಿವೆ ಎಂದು ಮಲಾಲಾ ಯೂಸುಫ್ಝಾಯಿ ಅಭಿಪ್ರಾಯಪಟ್ಟಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments