ಚೀನಾ ಭೇಟಿಯ ಬಳಿಕ ಮತ್ತೆ ಭಾರತವನ್ನು ಕೆಣಕಿದ ಮಾಲ್ಡೀವ್ಸ್ ಅಧ್ಯಕ್ಷ

Krishnaveni K
ಭಾನುವಾರ, 14 ಜನವರಿ 2024 (09:43 IST)
ನವದೆಹಲಿ: ದೈತ್ಯ ರಾಷ್ಟ್ರ ಚೀನಾವನ್ನು ಭೇಟಿ ಮಾಡಿದ ಬಳಿಕ ಮಾಲ್ಡೀವ್ಸ್ ಗೆ ಹುಂಬು ಧೈರ್ಯ ಬಂದಂತಿದೆ. ಹೀಗಾಗಿಯೇ ಮಾಲ್ಡೀವ್ಸ್ ಅಧ‍್ಯಕ್ಷ ಮೊಹಮ್ಮದ್ ಮೊಯಿಝು ಭಾರತವನ್ನು ಮತ್ತೆ ಕೆಣಕಿದ್ದಾರೆ.

ಮಾಲ್ಡೀವ್ಸ್ ಸಚಿವರಿಬ್ಬರು ಭಾರತ ಮತ್ತು ಪ್ರಧಾನಿ ಮೋದಿಗೆ ಅವಹೇಳನ ಮಾಡಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ ಸಂಪೂರ್ಣ ಹಳಸಿದೆ. ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಮಾಲ್ಡೀವ್ಸ್ ಪ್ರವಾಸಕ್ಕೆ ಬಹಿಷ್ಕಾರ ಹಾಕುವ ಮೂಲಕ ಭಾರತೀಯರು ಆ ದೇಶದ ಆದಾಯಕ್ಕೆ ಪೆಟ್ಟು ಕೊಟ್ಟಿದ್ದಾರೆ. ಅಲ್ಲದೆ, ಅವಹೇಳನಕಾರೀ ಹೇಳಿಕೆ ನೀಡಿದ ಸಚಿವರನ್ನು ವಜಾ ಮಾಡಲು ಭಾರತದ ಪಟ್ಟು ಹಿಡಿದಿತ್ತು. ಅದರಂತೆ ಅನಿರ್ದಿಷ್ಟಾವಧಿಗೆ ಸಚಿವರನ್ನು ಅಮಾನತೂ ಮಾಡಿದೆ.

ಆದರೆ ಈ ನಡುವೆ ಚೀನಾಕ್ಕೆ ಭೇಟಿ ನೀಡಿದ್ದ ಅಧ‍್ಯಕ್ಷ ಮೊಹಮ್ಮದ್ ಮೊಯಿಝುಗೆ ಆ ದೇಶದ ಬೆಂಬಲ ಹುಂಬು ಧೈರ್ಯ ಕೊಟ್ಟಿದೆ. ಪುಟ್ಟ ದೇಶವಾದರೂ ಮಾಲ್ಡೀವ್ಸ್ ಆಂತರಿಕ ವಿಚಾರದಲ್ಲಿ ಹೊರಗಿನವರು ತಲೆ ಹಾಕಿವಂತಿಲ್ಲ ಎಂದು ಚೀನಾ ಅಧ್ಯಕ್ಷರು ಭಾರತಕ್ಕೆ ಪರೋಕ್ಷ ಟಾಂಗ್ ಕೊಟ್ಟಿದ್ದರು.

ಇದೀಗ ಮಾಲ್ಡೀವ್ಸ್ ಅಧ್ಯಕ್ಷ ಮೊಯಿಝು ಕೂಡಾ ಭಾರತಕ್ಕೆ ಟಾಂಗ್ ಕೊಟ್ಟಿದ್ದಾರೆ. ‘ನಮ್ಮ ದೇಶ ಚಿಕ್ಕದಾಗಿರಬಹುದು. ಆದರೆ ನಮ್ಮನ್ನು ಬೆದರಿಸುವ ಹಕ್ಕು ನಾವು ಯಾರಿಗೂ ಕೊಟ್ಟಿಲ್ಲ’ ಎಂದಿದ್ದಾರೆ.  ಭಾರತದ ಆಕ್ರೋಶದಿಂದ ಥಂಡಾ ಹೊಡೆದಿದ್ದ ಮಾಲ್ಡೀವ್ಸ್ ಅಧ್ಯಕ್ಷರು ಈಗ ಚೀನಾ ಬೆಂಬಲ ಸಿಗುತ್ತಿದ್ದಂತೇ ಧೈರ್ಯ ತಂದುಕೊಂಡು ಭಾರತವನ್ನು ಕೆಣಕುವ ಪ್ರಯತ್ನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments