Webdunia - Bharat's app for daily news and videos

Install App

ಮೇ 10 ರ ನಂತರ ಭಾರತೀಯ ಸೇನೆ ಇಲ್ಲಿ ಇರಕೂಡದು: ಮಾಲ್ಡೀವ್ಸ್

Krishnaveni K
ಮಂಗಳವಾರ, 5 ಮಾರ್ಚ್ 2024 (17:10 IST)
ಮಾಲ್ಡೀವ್ಸ್: ಮೇ 10 ರ ಬಳಿಕ ಭಾರತೀಯ ಸೇನೆಯ ಯಾರೂ ನಮ್ಮ ದೇಶದಲ್ಲಿ ಇರಬಾರದು ಎಂದು ಮಾಲ್ಡೀವ್ಸ್ ಅಧ‍್ಯಕ್ಷ ಮೊಹಮ್ಮದ್ ಮೊಯಿಝು ಮತ್ತೊಮ್ಮೆ ಗುಟುರು ಹಾಕಿದ್ದಾರೆ.

ಇತ್ತೀಚೆಗೆ ಭಾರತದ ಜೊತೆಗೆ ಸಂಬಂಧ ಹಳಸಿದ ಬೆನ್ನಲ್ಲೇ ಮಾಲ್ಡೀವ್ಸ್ ಚೀನಾ ಜೊತೆ ಕೈ ಜೋಡಿಸಿತ್ತು. ತನ್ನ ನೆಲದಲ್ಲಿದ್ದ ಭಾರತೀಯ ಸೈನಿಕರನ್ನು ತೆರವುಗೊಳಿಸಲು ಸೂಚಿಸಿತ್ತು. ಇದರ ಬೆನ್ನಲ್ಲೇ ಭಾರತ-ಮಾಲ್ಡೀವ್ಸ್ ನಡುವಿನ ಸಂಬಂಧ ಹದಗೆಡಲು ಶುರುವಾಗಿತ್ತು. ಇದಕ್ಕೆಲ್ಲಾ ಚೀನಾ ಜೊತೆಗಿನ ಬಾಂಧವ್ಯವೇ ಕಾರಣ ಎಂಬ ಮಾತುಗಳೂ ಇವೆ.

ಇದೀಗ ಮತ್ತೊಮ್ಮೆ ಭಾರತೀಯ ಸೈನಿಕರು ಸಮವಸ್ತ್ರದಲ್ಲಿ ಅಥವಾ ಸಾಮಾನ್ಯ ದಿರಿಸಿನಲ್ಲಿಯೇ ಸರಿ ನಮ್ಮ ದೇಶದಲ್ಲಿ ಮೇ 10 ರ ಬಳಿಕ ಇರಕೂಡದು ಎಂದು ಮೊಹಮ್ಮದ್ ಮೊಯಿಝು ಆದೇಶಿಸಿದ್ದಾರೆ. ‘ಭಾರತೀಯ ಸೈನಿಕರು ನಮ್ಮ ದೇಶದಿಂದ ಹೋಗಲ್ಲ. ಮತ್ತೆ ಸಮವಸ್ತ್ರ ಬಿಟ್ಟು ಸಾಮಾನ್ಯ ದಿರಿಸಿನಲ್ಲಿ ಇಲ್ಲಿಯೇ ಇರಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಡುತ್ತಿವೆ. ಆದರೆ ಇದೆಲ್ಲಾ ಸುಳ್ಳು. ಯಾರೂ ಮೇ 10 ರ ನಂತರ ನಮ್ಮ ದೇಶದಲ್ಲಿ ಇರಬಾರದು’ ಎಂದಿದ್ದಾರೆ.

ಭಾರತೀಯ ಸೈನಿಕರು ಮಾಲ್ಡೀವ್ಸ್ ನಲ್ಲಿ ಮಾನವೀಯ ಮತ್ತು ವೈದ್ಯಕೀಯ ತುರ್ತು ಸಂದರ್ಭದಲ್ಲಿ ಸಹಾಯ ಮಾಡುವುದು ಇತ್ಯಾದಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಮಾಲ್ಡೀವ್ಸ್ ಈಗ ಈ ಕೆಲಸಗಳಿಗೆ ಶ್ರೀಲಂಕಾ ಸೇನೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆ ಮೂಲಕ ಭಾರತೀಯ ಸೇನೆಗೆ ನಿಮ್ಮ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments