Webdunia - Bharat's app for daily news and videos

Install App

ಭಾರತದ ಬಹಿಷ್ಕಾರದ ಬಿಸಿಯ ನಡುವೆ ಚೀನಾ ಮೊರೆ ಹೋದ ಮಾಲ್ಡೀವ್ಸ್

Krishnaveni K
ಸೋಮವಾರ, 8 ಜನವರಿ 2024 (10:29 IST)
ನವದೆಹಲಿ: ಭಾರತೀಯರ ಬಹಿಷ್ಕಾರದ ಬಿಸಿಯಿಂದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮದ ಆದಾಯಕ್ಕೆ ಈಗ ಭಾರೀ ಪೆಟ್ಟು ಬಿದ್ದಿದೆ.
 

ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರ ಬಗ್ಗೆ ಮತ್ತು ಭಾರತೀಯರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಭಾರತ ವಿರೋಧಿ ಹೇಳಿಕೆ ನೀಡಿದ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಸುರೇಶ್ ರೈನಾ, ಆಕಾಶ್ ಚೋಪ್ರಾ, ಇರ್ಫಾನ್ ಪಠಾಣ್, ನಟ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಅನೇಕರು ಮಾಲ್ಡೀವ್ಸ್ ಬಹಿಷ್ಕಾರದ ಅಭಿಯಾನಕ್ಕೆ ಬೆಂಬಲ ಘೋಷಿಸಿ ಟ್ವೀಟ್ ಮಾಡಿದ್ದರು.

ಇದರ ಬೆನ್ನಲ್ಲೇ ಬೆಚ್ಚಿಬಿದ್ದ ಮಾಲ್ಡೀವ್ಸ್ ಅವಹೇಳನಕಾರಿ ಟ್ವೀಟ್ ಮಾಡಿದ ಸಚಿವರನ್ನು ವಜಾ ಮಾಡಿತ್ತು. ಆದರೂ ಭಾರತದ ಬಹಿಷ್ಕಾರ ಯೋಜನೆಯಿಂದಾಗಿ ಮಾಲ್ಡೀವ್ಸ್ ಗೆ ಬುಕಿಂಗ್ ಆಗಿದ್ದ ಅನೇಕ ಪ್ರವಾಸ ಪ್ಯಾಕೇಜ್ ಗಳು, ವಿಮಾನ ಟಿಕೆಟ್ ಗಳು ರದ್ದಾಗಿತ್ತು.

ಇದೀಗ ಭಾರತದ ಜೊತೆಗಿನ ಸಂಬಂಧ ಹಳಸಿದ ಬೆನ್ನಲ್ಲೇ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮೊಯಿಝು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ. ಚೀನಾಗೆ ಮಾಲ್ಡೀವ್ಸ್ ಅಧ‍್ಯಕ್ಷರ ಸಾಮಾನ್ಯ ಭೇಟಿ ಇದು ಎಂದಾಗಿದ್ದರೂ ಭಾರತದ ಜೊತೆಗೆ ಸಂಬಂಧ ಹಳಸಿರುವಾಗಲೇ ಭಾರತದ ವಿರುದ್ಧ ಕತ್ತಿಮಸೆಯುವ ಚೀನಾಗೆ ಮಾಲ್ಡೀವ್ಸ್ ಅಧ‍್ಯಕ್ಷರ ಭೇಟಿ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments