Webdunia - Bharat's app for daily news and videos

Install App

ಬಲೂಚಿಸ್ತಾನ ಹೇಳಿಕೆ ನೀಡಿದ ಮೋದಿಯಿಂದ ರೆಡ್‌ಲೈನ್ ಕ್ರಾಸ್: ಪಾಕ್ ಕಿಡಿ

Webdunia
ಗುರುವಾರ, 18 ಆಗಸ್ಟ್ 2016 (20:13 IST)
ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ್ ಮತ್ತು ಪಾಕ್ ಆಕ್ರಮಿತ ಕಾಶ್ಮಿರದ ಬಗ್ಗೆ ಹೇಳಿಕೆ ನೀಡಿ ರೆಡ್ ಲೈನ್ ಕ್ರಾಸ್ ಮಾಡಿದ್ದಾರೆ. ಮುಂದಿನ ತಿಂಗಳು ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಸಾಮಾನ್ಯ ಸಭೆಯಲ್ಲಿ ಕಾಶ್ಮಿರದ ವಿಷಯವನ್ನು ಒತ್ತಾಯಪೂರ್ವಕವಾಗಿ ಪ್ರಸ್ತಾಪಿಸಲಾಗುವುದು ಎಂದು ಪಾಕಿಸ್ತಾನ ಹೇಳಿಕೆ ನೀಡಿದೆ.
 
ಕಳೆದ ವರ್ಷ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಕಾಶ್ಮಿರ ವಿಷಯವನ್ನು ಪ್ರಸ್ತಾಪಿಸಿದ್ದರು. ಈ ಬಾರಿ ಕೂಡಾ ಕಾಶ್ಮಿರ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರೆ ನಫೀಸ್ ಝಕಾರಿಯಾ ತಿಳಿಸಿದ್ದಾರೆ. 
 
ವಿಶ್ವಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿ ಭಾರತದ ಪ್ರಧಾನಿ ಮೋದಿ ಬಲೂಚಿಸ್ತಾನದ ಬಗ್ಗೆ ಹೇಳಿಕೆ ನೀಡಿ ರೆಡ್ ಲೈನ್ ಕ್ರಾಸ್ ಮಾಡಿದ್ದಾರೆ ಎಂದು ಜಕಾರಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಭಾರತ ಬಲೂಚಿಸ್ತಾನ್ ಮತ್ತು ಕರಾಚಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ. ಕಾಶ್ಮಿರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಚ್ಚಿಹಾಕಲು ಭಾರತ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
 
ವಿಶ್ವಸಂಸ್ಥೆಗೆ ತೆರಳುವ ನಿಯೋಗದ ನೇತೃತ್ವವನ್ನು ಪ್ರಧಾನಿ ಷರೀಫ್ ವಹಿಸಿಕೊಳ್ಳಲಿದ್ದು, ಕಾಶ್ಮಿರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮತ್ತು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರೆ ನಫೀಸಾ ಜಕಾರಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments