ಪ್ರಧಾನಿ ಮೋದಿಗೆ ಶಾಂತಿಬೇಕು, ಭದ್ರತೆ ಪಣಕ್ಕಿಟ್ಟು ಶಾಂತಿ ಬಯಸಲ್ಲ: ಯುಎಸ್ ಅಧಿಕಾರಿ

Webdunia
ಶನಿವಾರ, 21 ಅಕ್ಟೋಬರ್ 2017 (21:04 IST)
ಅಮೆರಿಕ: ಪ್ರಧಾನಿ ನರೇಂದ್ರ ಮೋದಿ ದೇಶದ ಭದ್ರತೆ ಪಣಕ್ಕಿಟ್ಟು ಪಾಕಿಸ್ತಾನದ ಜತೆ ಶಾಂತಿ ಬಯಸುವುದಿಲ್ಲ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಧಾನಿ ಮೋದಿ ದಕ್ಷಿಣ ಏಷ್ಯಾದಲ್ಲಿ ಶಾಂತಿ ನೆಲೆಸಬೇಕೆಂದು ಬಯಸುತ್ತಿದ್ದಾರೆ. ಇದು ಎಲ್ಲರಿಗೂ ತಿಳಿದಿದೆ. ಆದರೆ ಭಾರತದ ಭದ್ರತೆಯನ್ನ ಪಣಕ್ಕಿಟ್ಟು ಶಾಂತಿ ಮುಂದುವರಿಸಲಾರರು. ಆದ್ದರಿಂದ ಪಾಕ್‌ ಜತೆ ಶಾಂತಿ ಮಾತುಕತೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದು ಅವರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಭಾರತ ಮತ್ತು ಪಾಕ್‌ ಉಭಯ ರಾಷ್ಟ್ರಗಳು ಮಾತುಕತೆಗೆ ಮುಂದಾಗಬೇಕೆಂದು ಬಯಸುತ್ತೇವೆ. ಪರಸ್ಪರ ಮಾತುಕತೆ  ಮೂಲಕ ವಿಶ್ವಾಸ ವೃದ್ಧಿಗೆ ಮುಂದಾಗುವುದು ಮುಖ್ಯ. ಹೀಗಾಗಿ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆ ಸಾಧ್ಯವಾಗುತ್ತದೆ.  ಉಭಯ ದೇಶಗಳ ಸಮೃದ್ಧಿಯ ಮಟ್ಟವೂ ಹೆಚ್ಚುತ್ತದೆ ಎಂದಿದ್ದಾರೆ.

ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ರೆಕ್ಸ್‌ ಟಿಲ್ಲರ್‌ಸನ್‌ ಮುಂದಿನ ವಾರ ಭಾರತ ಹಾಗೂ ಪಾಕ್ ಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲೇ ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮತ್ತೇ ಪ್ರಶ್ನೆ ಹಾಕಿದ ಬಯೋಕಾನ್ ಮುಖ್ಯಸ್ಥೆ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments