Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಶಾಂತಿಬೇಕು, ಭದ್ರತೆ ಪಣಕ್ಕಿಟ್ಟು ಶಾಂತಿ ಬಯಸಲ್ಲ: ಯುಎಸ್ ಅಧಿಕಾರಿ

Webdunia
ಶನಿವಾರ, 21 ಅಕ್ಟೋಬರ್ 2017 (21:04 IST)
ಅಮೆರಿಕ: ಪ್ರಧಾನಿ ನರೇಂದ್ರ ಮೋದಿ ದೇಶದ ಭದ್ರತೆ ಪಣಕ್ಕಿಟ್ಟು ಪಾಕಿಸ್ತಾನದ ಜತೆ ಶಾಂತಿ ಬಯಸುವುದಿಲ್ಲ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಧಾನಿ ಮೋದಿ ದಕ್ಷಿಣ ಏಷ್ಯಾದಲ್ಲಿ ಶಾಂತಿ ನೆಲೆಸಬೇಕೆಂದು ಬಯಸುತ್ತಿದ್ದಾರೆ. ಇದು ಎಲ್ಲರಿಗೂ ತಿಳಿದಿದೆ. ಆದರೆ ಭಾರತದ ಭದ್ರತೆಯನ್ನ ಪಣಕ್ಕಿಟ್ಟು ಶಾಂತಿ ಮುಂದುವರಿಸಲಾರರು. ಆದ್ದರಿಂದ ಪಾಕ್‌ ಜತೆ ಶಾಂತಿ ಮಾತುಕತೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದು ಅವರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಭಾರತ ಮತ್ತು ಪಾಕ್‌ ಉಭಯ ರಾಷ್ಟ್ರಗಳು ಮಾತುಕತೆಗೆ ಮುಂದಾಗಬೇಕೆಂದು ಬಯಸುತ್ತೇವೆ. ಪರಸ್ಪರ ಮಾತುಕತೆ  ಮೂಲಕ ವಿಶ್ವಾಸ ವೃದ್ಧಿಗೆ ಮುಂದಾಗುವುದು ಮುಖ್ಯ. ಹೀಗಾಗಿ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆ ಸಾಧ್ಯವಾಗುತ್ತದೆ.  ಉಭಯ ದೇಶಗಳ ಸಮೃದ್ಧಿಯ ಮಟ್ಟವೂ ಹೆಚ್ಚುತ್ತದೆ ಎಂದಿದ್ದಾರೆ.

ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ರೆಕ್ಸ್‌ ಟಿಲ್ಲರ್‌ಸನ್‌ ಮುಂದಿನ ವಾರ ಭಾರತ ಹಾಗೂ ಪಾಕ್ ಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲೇ ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments