Webdunia - Bharat's app for daily news and videos

Install App

ರಷ್ಯಾ, ಉಕ್ರೇನ್‌ ಮಧ್ಯೆ ಸಂಧಾನ?

Webdunia
ಗುರುವಾರ, 18 ಆಗಸ್ಟ್ 2022 (13:55 IST)
ಮಾಸ್ಕೋ : ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ 176 ದಿನ ಕಳೆದಿದೆ. ಈಗ ಈ ಯುದ್ಧ ನಿಲ್ಲಿಸಲು ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ.
 
ಹೌದು. ಈ ವರ್ಷದ ಫೆಬ್ರವರಿ 20ರಿಂದ ಆರಂಭಗೊಂಡ ಯುದ್ಧವನ್ನು ನಿಲ್ಲಿಸಲು ಹಲವು ದೇಶಗಳು ಪ್ರಯತ್ನ ಮಾಡುತ್ತಿದ್ದರೂ ರಷ್ಯಾ ಬಗ್ಗುತ್ತಿಲ್ಲ. ಈಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾಗೆ ಭೇಟಿ ನೀಡಿದ್ದರಿಂದ ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ.

ಅಜಿತ್ ದೋವಲ್ ಅವರು ರಷ್ಯಾದ ಭದ್ರತಾ ಸಲಹೆಗಾರ ನಿಕೊಲಾಯ್ ಪಟ್ರುಶೆವ್ ಜೊತೆ ಮಾತುಕತೆ ನಡೆಸಲಿದ್ದಾರೆ. ನಿಕೊಲಾಯ್ ಪಟ್ರುಶೆವ್ ಅಲ್ಲದೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಲ್ಲದೇ ಹಲವು ನಾಯಕರ ಜೊತೆ ಉಕ್ರೇನ್ ವಿಚಾರದ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಎರಡು ದೇಶಗಳ ಮಧ್ಯೆ ಆರಂಭವಾದ ಯುದ್ಧದಿಂದ ವಿಶ್ವದೆಲ್ಲೆಡೆ ಸಮಸ್ಯೆ ಸೃಷ್ಟಿಯಾಗಿದ್ದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅದರಲ್ಲೂ ಯುರೋಪಿಯನ್ ದೇಶಗಳಲ್ಲಿ ಹಣದುಬ್ಬರ ಭಾರೀ ಏರಿಕೆಯಾಗಿದೆ. ಹೀಗಾಗಿ ಈ ರಾಷ್ಟ್ರಗಳು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮೇಲೆ ಯುದ್ಧ ನಿಲ್ಲಿಸುವಂತೆ ಒತ್ತಡ ಹೇರುತ್ತಿವೆ. 

ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಅಮೆರಿಕ ದೇಶಗಳು ರಷ್ಯಾ ಜೊತೆ ಮಾತುಕತೆ  ನಡೆಸಿ ಯುದ್ಧ ನಿಲ್ಲಿಸುವಂತೆ ಮನವೊಲಿಸಿ ಎಂದು ಭಾರತದ ಜೊತೆ ಕೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಜಿತ್ ದೋವಲ್ ರಷ್ಯಾ ಪ್ರವಾಸ ಭಾರೀ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments