Webdunia - Bharat's app for daily news and videos

Install App

ರಷ್ಯಾ, ಉಕ್ರೇನ್‌ ಮಧ್ಯೆ ಸಂಧಾನ?

Webdunia
ಗುರುವಾರ, 18 ಆಗಸ್ಟ್ 2022 (13:55 IST)
ಮಾಸ್ಕೋ : ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ 176 ದಿನ ಕಳೆದಿದೆ. ಈಗ ಈ ಯುದ್ಧ ನಿಲ್ಲಿಸಲು ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ.
 
ಹೌದು. ಈ ವರ್ಷದ ಫೆಬ್ರವರಿ 20ರಿಂದ ಆರಂಭಗೊಂಡ ಯುದ್ಧವನ್ನು ನಿಲ್ಲಿಸಲು ಹಲವು ದೇಶಗಳು ಪ್ರಯತ್ನ ಮಾಡುತ್ತಿದ್ದರೂ ರಷ್ಯಾ ಬಗ್ಗುತ್ತಿಲ್ಲ. ಈಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾಗೆ ಭೇಟಿ ನೀಡಿದ್ದರಿಂದ ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ.

ಅಜಿತ್ ದೋವಲ್ ಅವರು ರಷ್ಯಾದ ಭದ್ರತಾ ಸಲಹೆಗಾರ ನಿಕೊಲಾಯ್ ಪಟ್ರುಶೆವ್ ಜೊತೆ ಮಾತುಕತೆ ನಡೆಸಲಿದ್ದಾರೆ. ನಿಕೊಲಾಯ್ ಪಟ್ರುಶೆವ್ ಅಲ್ಲದೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಲ್ಲದೇ ಹಲವು ನಾಯಕರ ಜೊತೆ ಉಕ್ರೇನ್ ವಿಚಾರದ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಎರಡು ದೇಶಗಳ ಮಧ್ಯೆ ಆರಂಭವಾದ ಯುದ್ಧದಿಂದ ವಿಶ್ವದೆಲ್ಲೆಡೆ ಸಮಸ್ಯೆ ಸೃಷ್ಟಿಯಾಗಿದ್ದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅದರಲ್ಲೂ ಯುರೋಪಿಯನ್ ದೇಶಗಳಲ್ಲಿ ಹಣದುಬ್ಬರ ಭಾರೀ ಏರಿಕೆಯಾಗಿದೆ. ಹೀಗಾಗಿ ಈ ರಾಷ್ಟ್ರಗಳು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮೇಲೆ ಯುದ್ಧ ನಿಲ್ಲಿಸುವಂತೆ ಒತ್ತಡ ಹೇರುತ್ತಿವೆ. 

ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಅಮೆರಿಕ ದೇಶಗಳು ರಷ್ಯಾ ಜೊತೆ ಮಾತುಕತೆ  ನಡೆಸಿ ಯುದ್ಧ ನಿಲ್ಲಿಸುವಂತೆ ಮನವೊಲಿಸಿ ಎಂದು ಭಾರತದ ಜೊತೆ ಕೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಜಿತ್ ದೋವಲ್ ರಷ್ಯಾ ಪ್ರವಾಸ ಭಾರೀ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments