Publish Date: Fri, 28 Aug 2026 (10:44 IST)
Updated Date: Fri, 28 Aug 2026 (10:48 IST)
ನೇಪಾಳದಲ್ಲಿ ಭೋತೆಕೋಶಿ ನದಿ ಮತ್ತು ತ್ರಿಶೂಲಿ ನದಿ ಪ್ರದೇಶಗಳಲ್ಲಿ ಸಂಭವಿಸಿದ ಆಕಸ್ಮಿಕ ಪ್ರವಾಹ ಹಾಗೂ ಭೂಕುಸಿತದಿಂದಾಗಿ ವ್ಯಾಪಕ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಈ ಮಧ್ಯೆ, ಪ್ರವಾಸ ಹಾಗೂ ಕೈಲಾಸ ಮಾನಸಸರೋವರ ಯಾತ್ರೆಗಾಗಿ ನೇಪಾಳಕ್ಕೆ ತೆರಳಿದ್ದ ಕರ್ನಾಟಕದ ಕನಿಷ್ಠ 17 ನಾಗರಿಕರು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಕನ್ನಡಿಗರ ಪತ್ತೆಗೆ ಕಾರ್ಯಚರಣೆ: ಸಿಎಂ ಡಿ. ಕೆ. ಶಿವಕುಮಾರ್ ನೀಡಿದ ಮಾಹಿತಿಯಂತೆ, ಕರ್ನಾಟಕದಿಂದ ತೆರಳಿದ ಹಲವು ಪ್ರವಾಸಿಗರ ಪೈಕಿ 17 ಜನರ ಸುಳಿವು ಇನ್ನೂ ಲಭ್ಯವಾಗಿಲ್ಲ. ರಾಜ್ಯ ಸರ್ಕಾರವು ದೆಹಲಿಯಲ್ಲಿರುವ ಕರ್ನಾಟಕ ಭವನ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಸಂಯೋಜಿಸುತ್ತಿದೆ.
ಸಂತ್ರಸ್ತರೊಂದಿಗೆ ಮಾತುಕತೆ: ನೇಪಾಳದ ದುರಂತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿ ಕಾಠ್ಮಂಡುವಿನಲ್ಲಿ ಸುರಕ್ಷಿತವಾಗಿರುವ ಕಲಬುರಗಿಯ ಮಲ್ಲಿನಾಥ್ ಎಂಬ ಸಂತ್ರಸ್ತರೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
ಭಾರತೀಯರ ಸ್ಥಿತಿ: ನೇಪಾಳದಲ್ಲಿ ಸಂಭವಿಸಿದ ಈ ಜಲಪ್ರಳಯದಲ್ಲಿ ಭಾರತದ ವಿವಿಧ ರಾಜ್ಯಗಳ (ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ) 130ಕ್ಕೂ ಹೆಚ್ಚು ನಾಗರಿಕರು ಕಳೆದುಹೋಗಿದ್ದಾರೆ ಅಥವಾ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ.
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಗಾಗಿ ಹಾಗೂ ಸಹಾಯಕ್ಕಾಗಿ ಕರ್ನಾಟಕ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿ ಪ್ರತ್ಯೇಕ ತುರ್ತು ಸಹಾಯವಾಣಿಗಳನ್ನು ತೆರೆದಿವೆ:
ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ: 1070 / 080-22253707
ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ (WhatsApp ಲಭ್ಯ): +977 985 131 6807, +977 970 910 7500, +977 981 032 6117
ನೇಪಾಳದಲ್ಲಿ ಸಿಲುಕಿರುವ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಭಾರತೀಯ ವಾಯುಪಡೆ ಮತ್ತು ವಿಪತ್ತು ನಿರ್ವಹಣಾ ಪಡೆಗಳು (NDRF) ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ