Webdunia - Bharat's app for daily news and videos

Install App

ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ

Webdunia
ಶುಕ್ರವಾರ, 3 ಮಾರ್ಚ್ 2023 (09:00 IST)
ಬರ್ರೆನ್ : ನಿತ್ಯಾನಂದನಿಗೆ ಭಾರತದಿಂದ ಕಿರುಕುಳ ನೀಡುತ್ತಿಲ್ಲ. ಆದ್ರೆ ಭಾರತದಲ್ಲಿರುವ ಕೆಲವು ಹಿಂದೂ ವಿರೋಧಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕೈಲಾಸ ಯುನೈಟೆಡ್ ಸ್ಟೇಟ್ಸ್ನ ಶಾಶ್ವತ ರಾಯಭಾರಿ ವಿಜಯಾಪ್ರಿಯಾ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.
 
ಇತ್ತೀಚೆಗೆ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು.

ಈ ಸಭೆಯಲ್ಲಿ ನಿತ್ಯಾನಂದಗೆ ತನ್ನ ಜನ್ಮಸ್ಥಳದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ನಿತ್ಯಾನಂದನ ಶಿಷ್ಯೆ, ಹಿಂದೂ ವಿರೋಧಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿದ್ದಾರೆ.

ಫೆಬ್ರವರಿ 24 ರಂದು ನಡೆದ ಮಹಾಸಭೆಯಲ್ಲಿ ನೀಡಿದ್ದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿತ್ಯಾನಂದ ತಮ್ಮ ಜನ್ಮಸ್ಥಳದಲ್ಲಿ ಕೆಲವು ಹಿಂದೂ ವಿರೋಧಿಗಳಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ನಾನು ಹೇಳಿದ್ದೆ. ಕೈಲಾಸ ಯುನೈಟೆಡ್ ಸ್ಟೇಟ್ಸ್ ಭಾರತವನ್ನು ಉನ್ನತ ಗೌರವದಿಂದಲೇ ಕಾಣುತ್ತದೆ. ಈಗಲೂ ಭಾರತವನ್ನು ಗುರುಪೀಠವೆಂದೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments