Webdunia - Bharat's app for daily news and videos

Install App

ನೋ ಎಂಟ್ರಿ!: 13 ರಾಷ್ಟ್ರಗಳ ವಿಮಾನ ಸಂಚಾರ ನಿಷೇಧ

ಭಾರತ, ಪಾಕಿಸ್ತಾನ ಸೇರಿ 13 ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಎಂಟ್ರಿ ನಿಷೇಧ

Webdunia
ಶುಕ್ರವಾರ, 2 ಜುಲೈ 2021 (09:35 IST)
ನವದೆಹಲಿ (ಜು. 2): ಕೊರೋನಾ ಅಟ್ಟಹಾಸದಿಂದಾಗಿ ಅನೇಕ ದೇಶಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭಾರತದಲ್ಲಿ ಕೂಡ ಜುಲೈ 31ರವರೆಗೆ ಅಂತಾರಾಷ್ಟ್ರೀಯ ಕಮರ್ಷಿಯಲ್ ವಿಮಾನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದರ ನಡುವೆ ಸೌದಿ ರಾಷ್ಟ್ರಗಳಿಗೆ ಭಾರತ, ಪಾಕಿಸ್ತಾನ, ಅಮೆರಿಕ, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ವಿಯೆಟ್ನಾಂ, ಕಾಂಗೋ, ಉಗಾಂಡ, ಲಿಬೆರಿಯ, ದಕ್ಷಿಣ ಆಫ್ರಿಕಾ, ನೈಜೀರಿಯ ದೇಶಗಳ ಜನರ ಪ್ರವೇಶವನ್ನು ನಿಷೇಧಿಸಲಾಗಿದೆ.
 

ಭಾರತದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ ಹೆಚ್ಚಾಗಿದ್ದು, ಇದರ ಜೊತೆಗೆ ಬ್ಲಾಕ್ ಫಂಗಸ್, ವೈಟ್ ಫಂಗಸ್, ಡೆಲ್ಟಾ ಪ್ಲಸ್ ಮುಂತಾದ ಹೊಸ ರೂಪದ ಸೋಂಕುಗಳು ಪತ್ತೆಯಾಗುತ್ತಿವೆ. ಇದರಿಂದ ಹಲವು ದೇಶಗಳಲ್ಲಿ ಭಾರತದ ವಿಮಾನಗಳ ಪ್ರವೇಶಕ್ಕೆ ಅನುಮತಿ ನೀಡುತ್ತಿಲ್ಲ. ಯುಎಇ ಕೂಡ ಭಾರತ, ಪಾಕಿಸ್ತಾನ ಸೇರಿ 13 ರಾಷ್ಟ್ರಗಳ ಪ್ರಯಾಣಿಕರಿಗೆ ನಿಷೇಧ ಹೇರಿದೆ. ಜುಲೈ 21ರವರೆಗೆ ಈ ನಿಷೇಧ ಮುಂದುವರೆಯಲಿದೆ. ಕೊರೋನಾ ಸೋಂಕು ಹೆಚ್ಚಿರುವ 13 ರಾಷ್ಟ್ರಗಳಿಗೆ ಈ ನಿಷೇಧ ಅನ್ವಯವಾಗಲಿದೆ.
ಕೊರೋನಾ ಹಾವಳಿ ಹೆಚ್ಚಾಗಿರುವುದರಿಂದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಸೇರಿ 13 ರಾಷ್ಟ್ರಗಳ ಪ್ರಯಾಣಿಕರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಯುಎಇಯ ನಾಗರಿಕ ವಿಮಾನಯಾನ ಪ್ರಾಧಿಕಾರ ಘೋಷಿಸಿದೆ. ಭಾರತದಲ್ಲಿ ಲಾಕ್ಡೌನ್ ತೆರವುಗೊಳಿಸಿದ ಬಳಿಕ ಜೂನ್ 23ರಿಂದ ದುಬೈನಿಂದ ಭಾರತಕ್ಕೆ ವಿಮಾನ ಸಂಚಾರ ಶುರುವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಜುಲೈ 7ರಿಂದ ವಿಮಾನಗಳಿಗೆ ಟಿಕೆಟ್ ಬುಕಿಂಗ್ ಕೂಡ ಆರಂಭಿಸಲಾಗಿತ್ತು. ಆದರೆ, ಮತ್ತೆ ಪ್ರವೇಶ ನಿಷೇಧದ ಗಡುವನ್ನು ವಿಸ್ತರಿಸಲಾಗಿದೆ.
ಕಳೆದ ಏಪ್ರಿಲ್ನಿಂದ ಅರಬ್ ರಾಷ್ಟ್ರಗಳಿಗೆ ಭಾರತದಿಂದ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಜೂನ್ ಅಂತ್ಯದ ವೇಳೆಗೆ ಈ ನಿರ್ಬಂಧ ತೆರವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ತಿಂಗಳಾಂತ್ಯದವರೆಗೆ ಮತ್ತೆ ನಿರ್ಬಂಧ ವಿಸ್ತರಿಸಲಾಗಿದೆ. ಆದರೆ, ಯುಎಇ ನಾಗರಿಕರು, ಅಧಿಕಾರಿಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಮುಂದಿನ ಸುದ್ದಿ
Show comments