Webdunia - Bharat's app for daily news and videos

Install App

ಕೆಲ ಗಂಟೆಗಳ ಅಂತರದಲ್ಲಿ ಕ್ಷಿಪಣಿ ಪರೀಕ್ಷೆ ನಡೆಸಿದ ಉತ್ತರ ಮತ್ತು ದಕ್ಷಿಣ ಕೊರಿಯಾ

Webdunia
ಗುರುವಾರ, 16 ಸೆಪ್ಟಂಬರ್ 2021 (08:10 IST)
ಸಿಯೋಲ್, ಸೆ.16 : ಬುಧವಾರ ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳು ಕೆಲವೇ ಗಂಟೆಗಳ ಅಂತರದಲ್ಲಿ ತಮ್ಮ ಪ್ರಕ್ಷೇಪಕ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿವೆ ಎಂದು ಎಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಭಾರತೀಯ ಕಾಲಮಾನ ಬುಧವಾರ ಬೆಳಿಗ್ಗೆ 6 ಗಂಟೆಗೆ ಉತ್ತರ ಕೊರಿಯಾ ತನ್ನ ಪೂರ್ವ ಕರಾವಳಿಯಲ್ಲಿ ಗುರುತಿಸಲಾಗದ 2 ಕ್ಷಿಪಣಿಗಳನ್ನು ಉಡಾಯಿಸಿದೆ. ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಗುಪ್ತಚರ ವಿಭಾಗ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿವೆ ಎಂದು ದಕ್ಷಿಣ ಕೊರಿಯಾ ರಕ್ಷಣಾ ಪಡೆಯ ಜಂಟಿ ಮುಖ್ಯಸ್ಥರ ಹೇಳಿಕೆ ತಿಳಿಸಿದೆ. ಗರಿಷ್ಟ 60 ಕಿ.ಮೀ ಎತ್ತರದಲ್ಲಿ ಹಾರಿದ ಈ ಕ್ಷಿಪಣಿ ಸುಮಾರು 800 ಕಿ.ಮೀ ದೂರ ಸಾಗಿದೆ.
ಕೊರಿಯಾ ದ್ವೀಪಸಮುದಾಯದ ಪೂರ್ವ ತೀರದತ್ತ ಸಾಗಿದ ಕ್ಷಿಪಣಿ, ಜಪಾನ್ನ ಆರ್ಥಿಕ ವಲಯ ವ್ಯಾಪ್ತಿಯ ಹೊರಭಾಗದ ಪ್ರದೇಶಕ್ಕೆ ಅಪ್ಪಳಿಸಿದೆ ಎಂದು ವರದಿಯಾಗಿದೆ.
ಕಳೆದ ವಾರಾಂತ್ಯ ಉತ್ತರ ಕೊರಿಯಾ ದೀರ್ಘವ್ಯಾಪ್ತಿಯ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದು ಈ ಕ್ಷಿಪಣಿ ಜಪಾನ್ ದೇಶವನ್ನು ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಮೂಲಗಳು ಹೇಳಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಜಪಾನ್ ಪ್ರಧಾನಿ ಯೊಶಿಹಿದೆ ಸುಗಾ ' ಕ್ಷಿಪಣಿ ಪರೀಕ್ಷೆಯು ಜಪಾನ್ ಮತ್ತು ಈ ವಲಯದ ಸುರಕ್ಷತೆಯ ಮೇಲಿನ ಬೆದರಿಕೆಯಾಗಿದೆ. ನಮ್ಮ ಜಾಗರೂಕತೆ ಮತ್ತು ಕಣ್ಗಾವಲನ್ನು ಮತ್ತಷ್ಟು ಹೆಚ್ಚಿಸಲು ಹಾಗೂ ಯಾವುದೇ ಆಕಸ್ಮಿಕ ಸಂದರ್ಭಗಳಿಗೆ ಸನ್ನದ್ಧರಾಗಿರಲು ಜಪಾನ್ ಸರಕಾರ ನಿರ್ಧರಿಸಿದೆ' ಎಂದಿದ್ದಾರೆ.
ಅಂತರ್ ರಾಷ್ಟ್ರೀಯ ಕಾನೂನಿನಲ್ಲಿ ಉತ್ತರ ಕೊರಿಯಾಕ್ಕೆ ಪರಮಾಣು ಪರೀಕ್ಷೆ ಅಥವಾ ಪ್ರಕ್ಷೇಪಕ ಕ್ಷಿಪಣಿ ಪರೀಕ್ಷೆಗೆ ಅವಕಾಶವಿಲ್ಲ. ಆದರೆ ಬುಧವಾರ ಉತ್ತರ ಕೊರಿಯಾ ಉಡಾಯಿಸಿದ ಕ್ಷಿಪಣಿ ಕಡಿಮೆ ದೂರವ್ಯಾಪ್ತಿಯದ್ದಾಗಿರುವುದರಿಂದ ತಕ್ಷಣವೇ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಹೊಸ ನಿರ್ಬಂಧ ಜಾರಿಯಾಗುವ ಸಾಧ್ಯತೆಯಿಲ್ಲ ಎಂದು ಎಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.
ಈ ಮಧ್ಯೆ, ಉ.ಕೊರಿಯಾದ ಕ್ಷಿಪಣಿ ಪರೀಕ್ಷೆಯ ಕೆಲ ಗಂಟೆಗಳ ಬಳಿಕ ತಾನು ಸಬ್ಮೆರೀನ್ನಿಂದ ಉಡಾಯಿಸುವ ಪ್ರಕ್ಷೇಪಕ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿರುವುದಾಗಿ ದಕ್ಷಿಣ ಕೊರಿಯಾ ಘೋಷಿಸಿದೆ. ದೇಶೀಯವಾಗಿ ನಿರ್ಮಿಸಿರುವ ಈ ಕ್ಷಿಪಣಿ ಉದ್ದೇಶಿತ ಗುರಿ ತಲುಪಿದ್ದು ಈ ಮೂಲಕ ಆತ್ಮರಕ್ಷಣೆಗೆ ಹೆಚ್ಚಿನ ಬಲ ದೊರೆತಂತಾಗಿದೆ ಮತ್ತು ಕೊರಿಯಾ ದ್ವೀಪಸಮುದಾಯಕ್ಕೆ ಹೊರಗಿನಿಂದ ಎದುರಾಗಬಹುದಾದ ಬೆದರಿಕೆಯನ್ನು ಎದುರಿಸಲು ಹಾಗೂ ಶಾಂತಿ ನೆಲೆಸಲು ನೆರವಾಗಲಿದೆ ಎಂದು ದಕ್ಷಿಣ ಕೊರಿಯಾ ಸರಕಾರ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments