Select Your Language

Notifications

webdunia
webdunia
webdunia
webdunia

ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡಲ್ಲ !

ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡಲ್ಲ !
ಕೀವ್ , ಗುರುವಾರ, 28 ಏಪ್ರಿಲ್ 2022 (08:08 IST)
ಕೀವ್ : ರಷ್ಯಾ-ಉಕ್ರೇನ್ ಯುದ್ಧದ ಕುರಿತು ಭಾರತದ ನಿಲುವಿನ ಬಗ್ಗೆ ಮಾತನಾಡಿದ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ತಟಸ್ಥತೆ ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡುವುದಿಲ್ಲ ಎಂದು ಹೇಳಿದರು.

ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿ 2 ತಿಂಗಳು ಕಳೆದಿವೆ. ಭಾರತ ಈ ಎರಡು ದೇಶಗಳಲ್ಲಿ ಯವುದಕ್ಕೂ ಬೆಂಬಲ ನೀಡದೇ ತಟಸ್ಥ ನಿಲುವನ್ನು ಪ್ರದರ್ಶಿಸಿದೆ. ಇದರ ನಡುವೆಯೂ ಹಲವು ಬಾರಿ ಉಕ್ರೇನ್ ಹಾಗೂ ರಷ್ಯಾ ದೇಶಗಳಿಗೆ ಯುದ್ಧ ನಿಲ್ಲಿಸುವಂತೆ ಮನವಿಯನ್ನೂ ಮಾಡಿದೆ. 

ಯುದ್ಧದ ಬಗ್ಗೆ ತಟಸ್ಥ ನಿಲುವನ್ನು ಹೊಂದಿರುವ ಭಾರತದ ಬಗ್ಗೆ ಮಾತನಾಡಿದ ಉಕ್ರೇನ್ ವಿದೇಶಾಂಗ ಸಚಿವ, ಭಾರತದ ಸಹಾನುಭೂತಿ ಹಾಗೂ ಯುದ್ಧವನ್ನು ನಿಲ್ಲಿಸಬೇಕು ಎಂಬ ನಿಲುವನ್ನು ಪ್ರಶಂಸಿಸುತ್ತೇವೆ. ಆದರೆ ತಟಸ್ಥ ಧೋರಣೆ ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡುವುದಿಲ್ಲ ಎಂಬುದನ್ನು ನಾನು ತಿಳಿಸಬಯಸುತ್ತೇನೆ ಎಂದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಮುಗಿದಿಲ್ಲ, ಮಾರ್ಗಸೂಚಿಗಳನ್ನು ಅನುಸರಿಸಿ : ಉದ್ಧವ್ ಠಾಕ್ರೆ