Webdunia - Bharat's app for daily news and videos

Install App

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Krishnaveni K
ಬುಧವಾರ, 7 ಮೇ 2025 (09:14 IST)
Photo Credit: X
ಇಸ್ಲಾಮಾಬಾದ್: ಆಪರೇಷನ್ ಸಿಂದೂರ್ ಹೆಸರಿನಲ್ಲಿ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತಕ್ಕೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮಾತಿನಲ್ಲೇ ತಿರುಗೇಟು ನೀಡಿದ್ದಾರೆ. ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೂ ಗೊತ್ತು ಎಂದಿದ್ದಾರೆ.

ನಿನ್ನೆ ತಡರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆ ಭಾರತೀಯ ಸೇನೆ ದಾಳಿ ನಡೆಸಿ ಸಾಕಷ್ಟು ಉಗ್ರರನ್ನು ಮಟ್ಟ ಹಾಕಿದೆ. ತನ್ನ ಗಡಿಯೊಳಗೆ ಭಾರತ ದಾಳಿ ನಡೆಸಿರುವುದನ್ನು ಖಚಿತಪಡಿಸಿರುವ ಪಾಕಿಸ್ತಾನ ಪ್ರಧಾನಿ ಷರೀಫ್ ಪ್ರತೀಕಾರದ ಮಾತನಾಡಿದ್ದಾರೆ.

ಭಾರತ ದಾಳಿ ನಡೆಸಿದ್ದು ಯುದ್ಧ ಸಾರಿರುವುದಕ್ಕೆ ಸಮ ಎಂದಿರುವ ಪಾಕ್ ಪ್ರಧಾನಿ ಇದಕ್ಕೆ ನಾವು ತಕ್ಕ ತಿರುಗೇಟು ನೀಡಲಿದ್ದೇವೆ ಎಂದಿದ್ದಾರೆ. ಪಾಕಿಸ್ತಾನಕ್ಕೆ ತಿರುಗೇಟು ನೀಡುವ ಎಲ್ಲಾ ಹಕ್ಕುಗಳೂ ಇವೆ ಎಂದಿದ್ದಾರೆ.

‘ಶತ್ರುಗಳು ಯಶಸ್ಸು ಸಾಧಿಸುವುದನ್ನು ಬಿಡೆವು. ನಾವು ಅವರು ದುಃಖಿಸುವಂತೆ ಮಾಡಲಿದ್ದೇವೆ. ಶತ್ರುಗಳನ್ನು ಸದೆಬಡಿಯಲು ನಮಗೂ ಗೊತ್ತು. ಭಾರತ ಸಾರಿರುವ ಯುದ್ಧಕ್ಕೆ ತಕ್ಕ ಉತ್ತರ ಕೊಡುವ ಎಲ್ಲಾ ಹಕ್ಕುಗಳು ನಮಗೆ ಇದೆ. ಶತ್ರು ರಾಷ್ಟ್ರವನ್ನು ಹೇಗೆ ಡೀಲ್ ಮಾಡಬೇಕು ಗೊತ್ತು’ ಎಂದಿದ್ದಾರೆ. ಇದರ ಜೊತೆಗೆ ಇಂದು ಪಾಕ್ ಭದ್ರತಾ ಸಲಹೆಗಾರರೊಂದಿಗೆ ಸಭೆಯನ್ನೂ ಕರೆದಿದ್ದಾರೆ. ಮುಂದಿನ 48 ಗಂಟೆಗಳಿಗೆ ಪಾಕಿಸ್ತಾನ ತನ್ನ ಎಲ್ಲಾ ವಿಮಾನ ಯಾನವನ್ನು ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments