Webdunia - Bharat's app for daily news and videos

Install App

ಆನ್ಲೈನ್ ಫ್ರಿಡ್ಜ್ ಆರ್ಡರ್ ಮಾಡಿ ಲಕ್ಷಾಧಿಪತಿಯಾದ ಗ್ರಾಹಕ, 96 ಲಕ್ಷ ರೂ. ಬಂಡಲ್!

Webdunia
ಸೋಮವಾರ, 16 ಆಗಸ್ಟ್ 2021 (15:14 IST)
ದಕ್ಷಿಣ ಕೊರಿಯಾ(ಆ.16): ಆನ್ಲೈನ್ ಮೂಲಕ ಖರೀದಿಸಿದ ಫ್ರಿಡ್ಜ್ನಿಂದ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬನ ಅದೃಷ್ಟ ಖುಲಾಯಿಸಿದ್ದು, ಬರೋಬ್ಬರಿ 96 ಲಕ್ಷ ರೂ. ನಗದು ಪಡೆದಿದ್ದಾನೆ. ವರದಿಯನ್ವಯ, ಆ ವ್ಯಕ್ತಿ ದಕ್ಷಿಣ ಕೊರಿಯಾದ ಜೆಜು ದ್ವೀಪದ ನಿವಾಸಿಯಾಗಿದ್ದು, ಈ ಹಣದ ಬಗ್ಗೆ ಆತನಿಗೆ ತಿಳಿದಿರಲಿಲ್ಲ. ಆ ವ್ಯಕ್ತಿ ಆಗಸ್ಟ್ 6 ರಂದು ನಗದು ರಸೀದಿ ವರದಿ ಸಲ್ಲಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಫ್ರಿಜ್ ಸ್ವಚ್ಛಗೊಳಿಸುವಾಗ ಇದರಲ್ಲಿ 96 ಲಕ್ಷ ರೂಪಾಯಿ ಪತ್ತೆಯಾಗಿದೆ ಎಂದು ತಿಳಿಸಿದ್ದಾನೆ.

ತಾನು ಸ್ವಚ್ಛಗೊಳಿಸಿದ್ದ ಫ್ರಿಡ್ಜ್ ಇತ್ತೀಚೆಗಷ್ಟೇ ಆನ್ಲೈನ್ ಮೂಲಕ ಖರೀದಿಸಿದ್ದು ಎಂದು ಆತ ತಿಳಿಸಿದ್ದಾನೆ. ಎಂಬಿಸಿ ನ್ಯೂಸ್ ನಲ್ಲಿ ಬಂದ ವರದಿಯ ಪ್ರಕಾರ, ಹಣವನ್ನು ಪ್ಲಾಸ್ಟಿಕ್ ಹಾಳೆಯಲ್ಲಿ ಪ್ಯಾಕ್ ಮಾಡಿ ಫ್ರಿಜ್ ನ ಕೆಳಭಾಗಕ್ಕೆ ಅಂಟಿಸಲಾಗಿತ್ತು. ಈ ನೋಟುಗಳನ್ನು ಫ್ರಿಡ್ಜ್ಗೆ ಅಂಟಿಸಲಾಗಿತ್ತು.
ಹೀಗಿದ್ದರೂ ಆ ವ್ಯಕ್ತಿ ಈ ಹಣವನ್ನು ಪೊಲೀಸರಿಗೆ ನೀಡಿದ್ದಾನೆ. ಬಳಿಕ ಪೊಲೀಸರು ರೆಫ್ರಿಜರೇಟರ್ ಡೆಲಿವರಿ ಮಾಡಿದ ಆನ್ಲೈನ್ ಮಾರಾಟಗಾರರನ್ನು ಗುರುತಿಸಿ ವಿಚಾರಣೆಗೆ ಆದೇಶಿಸಲಾಗಿದೆ. ಪ್ರಕರಣದ ಬಗ್ಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು "ಇದು ಬಹಳ ದೊಡ್ಡ ಮೊತ್ತವಾಗಿದ್ದು, ಅಪರೂಪದ ಪ್ರಕರಣವಾಗಿದೆ. ಫ್ರಿಡ್ಜ್ನ ಮಾಲೀಕರು ಪೊಲೀಸರಿಗೆ ಹಣವನ್ನು ಹಿಂದಿರುಗಿಸಿದರೂ, ಗ್ರಾಹಕ ಮತ್ತೆ ಹಣವನ್ನು ಮರಳಿ ಪಡೆಯುವ ಸಾಧ್ಯತೆಯಿದೆ. ಏಕೆಂದರೆ ದಕ್ಷಿಣ ಕೊರಿಯಾದ ಲಾಸ್ಟ್ ಅಂಡ್ ಫೌಂಡ್ ಆಕ್ಟ್ ಅಡಿಯಲ್ಲಿ, ಮಾಲೀಕರನ್ನು ಪತ್ತೆ ಮಾಡಲಾಗದಿದ್ದರೆ, ಇದನ್ನು ಪಡೆದವರಿಗೆ ಈ ಹಣ ಉಳಿಸಿಕೊಳ್ಳುವ ಹಕ್ಕಿದೆ ಎಂದಿದ್ದಾರೆ.
ಇನ್ನು ಈ ಹಣದ ಮಾಲೀಕ ಪತ್ತೆಯಾದರೂ ಒಟ್ಟು ಮೊತ್ತದ 22% ಅನ್ನು ತೆರಿಗೆಯಾಗಿ ಪಾವತಿಸಬೇಕಾಗುತ್ತದೆ. ಬಳಿಕ ಬಾಕಿ ಮೊತ್ತವನ್ನು ನೀಡಲಾಗುತ್ತದೆ. ಇನ್ನು ಈ ಹಣದ ಹಿಂದೆ ಕ್ರಿಮಿನಲ್ ಸಂಪರ್ಕವಿದ್ದರೆ ಅದನ್ನು ಯಾರಿಗೂ ನಿಡಲಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments