Webdunia - Bharat's app for daily news and videos

Install App

ಅಫ್ಘಾನ್ ಸೇನೆಯಿಂದ ಏರ್ಸ್ಟ್ರೈಕ್, 200ಕ್ಕೂ ಅಧಿಕ ತಾಲಿಬಾನಿಯರು ಹತ!

Webdunia
ಭಾನುವಾರ, 8 ಆಗಸ್ಟ್ 2021 (13:54 IST)
ಕಬೂಲ್(ಆ.08): ಅಫ್ಘಾನ್ ವಾಯುಪಡೆಯು ಶೆಬರ್ಜೆನ್ ನಗರದಲ್ಲಿ ಏರ್ಸ್ಟ್ರೈಕ್ ನಡೆಸಿ ತಾಲಿಬಾನ್ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಿಂದ ತಾಲಿಬಾನಿಯರಿಗೆ ಅಪಾಯ ಹಾನಿಯುಂಟಾಗಿದೆ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.ಈ ದಾಳಿಯಲ್ಲಿ 200 ಕ್ಕೂ ಹೆಚ್ಚು ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯದ ಅಧಿಕಾರಿ ಫವಾದ್ ಅಮನ್ ಟ್ವೀಟ್ ಈ ಬಗ್ಗೆ ಮಾತನಾಡಿದ್ದು, "ಶನಿವಾರ ಸಂಜೆ ತಾಲಿಬಾನಿಯರ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ್ದು, ಈ ದಾಳಿಯಲ್ಲಿ 200 ಕ್ಕೂ ಹೆಚ್ಚು ತಾಲಿಬಾನ್ ಉಗ್ರರನ್ನು ಶೆಬರ್ಜೆನ್ ನಗರದಲ್ಲಿ ಹತರಾಗಿದ್ದಾರೆ. ಈ ದಾಳಿಯಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡುಗಳಿದ್ದ ಶಿಬಿರದ ಮೇಲೆ ದಾಳಿ ನಡೆಸಿದ್ದು, ಉಗ್ರರ 100 ಕ್ಕೂ ಹೆಚ್ಚು ವಾಹನಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.
ಬಿ -52 ಬಾಂಬರ್ ಶನಿವಾರ ಸಂಜೆ 6.30 ಕ್ಕೆ ಜವಾಜಾನ್ ಪ್ರಾಂತ್ಯದ ಶೆಬರ್ಜೆನ್ ಪಟ್ಟಣದಲ್ಲಿ ತಾಲಿಬಾನ್ ಕೂಟವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯದ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದು "ಇಂದು ಸಂಜೆ 6: 30 ಕ್ಕೆ ಜವಾಜಾನ್ ಪ್ರಾಂತ್ಯದ ಶೆಬರ್ಗಾನ್ ನಗರದಲ್ಲಿ ತಾಲಿಬಾನ್ ಕೂಟವನ್ನು ಬಿ -52 ವಿಮಾನವು ಗುರಿಯಾಗಿಸಿಕೊಂಡಿದೆ. ಯುಎಸ್ ವಾಯುಪಡೆಯ ವೈಮಾನಿಕ ದಾಳಿಯ ಪರಿಣಾಮವಾಗಿ ಭಯೋತ್ಪಾದಕರಿಗೆ ಭಾರೀ ಹಾನಿಯಾಗಿದೆ' ಎಂದಿದ್ದಾರೆ.
ಈ ಹಿಂದೆ, ಗಜನಿ ಪ್ರಾಂತೀಯ ಕೇಂದ್ರದ ಹೊರವಲಯದಲ್ಲಿ ಪಾಕಿಸ್ತಾನದ ಭಯೋತ್ಪಾದಕನನ್ನು ಅಫ್ಘಾನ್ ಕಮಾಂಡೋ ಪಡೆ ಬಂಧಿಸಿತ್ತು. ಆತ ಭಯೋತ್ಪಾದಕ ಚಟುವಟಿಕೆ ಮತ್ತು ನಾಗರಿಕರನ್ನು ಕೊಲ್ಲುವುದರಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಕೇಳಿ ಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments